ಕಾಪು : ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಸಾನಿಧ್ಯದಲ್ಲಿ ಫೆ. 28 ರಿಂದ ಮಾ.2 ರವರೆಗೆ ಜರಗಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – ಮಾತೃ ವೈಭವಕ್ಕೆ ಪೂರ್ವಭಾವಿಯಾಗಿ ಫೆ. 26 ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆ ವೈಭವ ನಡೆಯಲಿದೆ.
ಮೂರು ದಿನಗಳ ಕಾಲ ನಡೆಯುವ ಮಾತೃವೈಭವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಯುಕ್ತ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಪ್ರತೀ ದಿನ ಮಧ್ಯಾಹ್ನ ಮತ್ತು ರಾತ್ರಿ ನಿರಂತರ ಅನ್ನಸಂತರ್ಪಣೆ ನಡೆಯಲಿದೆ. ಅದಕ್ಕೆ ಪೂರಕವಾಗಿ ಭಕ್ತಾಧಿಗಳು, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿಂದ ಹೊರೆಕಾಣಿಕೆ ಸಂಗ್ರಹಿಸಲು ತೀರ್ಮಾನಿಸಿದೆ.
ಇದನ್ನೂ ಓದಿ : 👇
ಸಮಿತಿಯು ಕಾಪು ಮಾರಿಯಮ್ಮನ ಭಕ್ತಾಧಿಗಳು, ಕಾಪುವಿನ ಅಮ್ಮನ ಮಕ್ಕಳು, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿಂದ ಸಂಗ್ರಹಿಸುವ ಹೊರೆಕಾಣಿಕೆಯನ್ನು ಫೆ. 26ರಂದು ಸಂಜೆ ಗಂಟೆ 4 ಗಂಟೆಗೆ ಕಾಪು ಉಳಿಯಾರಗೋಳಿ ದಂಡತೀರ್ಥ ಮಠದ ಬಳಿಯಿಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆಯ ಮೂಲಕವಾಗಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಮರ್ಪಿಸಲಾಗುವುದು ಎಂದು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ಮಾತೃವೈಭವ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಹೊರೆಕಾಣಿಕೆ ಸಮರ್ಪಣಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : 👇
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…