Featured

ಫೆ.7 ಮತ್ತು 8ರಂದು ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳ – vishwanews24

ಫೆ.7 ಮತ್ತು 8ರಂದು ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳ

ಮಂಗಳೂರು: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳವು ಫೆ.7 ಮತ್ತು 8ರಂದು ನಡೆಯಲಿದ್ದು, ಇದರ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದೆ. ಐಕಳ ಕಂಬಳದಲ್ಲಿ ಜೂಜು ನಿಯಂತ್ರಣ ಹಾಗೂ ಸಮಯಪಾಲನೆಗೆ ಆದ್ಯತೆ ನೀಡಲಾಗುವುದು ಎಂದು ಕಂಬಳ ಅಸೋಸಿಯೇಶನ್ ಮತ್ತು ಐಕಳ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದರು.

ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಬಳದಲ್ಲಿ ಜೂಜು ಸಕ್ರಿಯವಾಗಿರುವ ಬಗ್ಗೆ ಈಗಾಗಲೇ ದೂರುಗಳು ಬಂದಿದೆ. ಐಕಳ ಕಂಬಳದಲ್ಲಿ ಅದನ್ನು ಸಂಪೂರ್ಣ ನಿಯಂತ್ರಣ ತರಲಾಗುವುದು. ಅಲ್ಲದೆ ಕಂಬಳದಲ್ಲಿ ಕೋಣ ಬಿಡುವ ವಿಚಾರಕ್ಕೆ ಸಮಯ ನಿಗದಿಮಾಡಲಾಗಿದೆ. ನಿಗದಿತ ಅವಧಿಗೆ ಕೋಣ ಗಂತಿಗೆ ಬಾರದಿದ್ದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು. ಈ ಮೂಲಕ ಕಂಬಳದಲ್ಲಿ ಸಮಯಪಾಲನೆಗೆ ಆದ್ಯತೆ ನೀಡಲಾಗುವುದು ಎಂದರು.

ಫೆ.3ರಿಂದ 8ರವರೆಗೆ ನಿರಂತರ ಕಂಬಳೋತ್ಸವ, ಧಾರ್ಮಿಕ ಕಾರ್ಯಕ್ರಮ, ಅನ್ನಸಂತರ್ಪಣೆ ನಡೆಯಲಿದೆ. 6ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಮೇಳದ ಯಕ್ಷಗಾನ ನಡೆಯಲಿದೆ. ಫೆ.7ರಂದು ಬೆಳಗ್ಗೆ 8ಕ್ಕೆ ಕರೆಮುಹೂರ್ತ ನಡೆಯಲಿದ್ದು, ಕೋಣಗಳು ಕರೆಗೆ ಇಳಿಯಲಿದೆ. ಬೆಳಗ್ಗೆ 9:30ಕ್ಕೆ ವಾಸ್ತುತಜ್ಞ ಚಂದ್ರಶೇಖರ ಸ್ವಾಮೀಜಿ ಕಂಬಳಕ್ಕೆ ಚಾಲನೆ ನೀಡಲಿದ್ದಾರೆ. ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ರಿಗೆ ಕಂಬಳ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಕಂಬಳದಲ್ಲಿ ಎಲ್ಲ ಕೋಣಗಳ ಯಜಮಾನರನ್ನು ವಿಶೇಷವಾಗಿ ಗೌರವಿಸಲಾಗುವುದು. ವಿಜೇತ ಕೋಣಗಳಿಗೆ ಚಿನ್ನದೊಂದಿಗೆ ನಗದು ಬಹುಮಾನ ನೀಡಲಾಗುವುದು. ಸೆಮಿಫೈನಲ್‌ಗೆ ಬಂದಿರುವ ಎಲ್ಲ ಕೋಣಗಳಿಗೆ ವಿಶೇಷ ಬಹುಮಾನವಿದೆ. ಕನಹಲಗೆ ವಿಭಾಗದಲ್ಲಿ ಭಾಗವಹಿಸುವ ವಿಜೇತ ಕೋಣಗಳಿಗೆ ಚಿನ್ನದೊಂದಿಗೆ ಎಲ್ಲಾ ಕೋಣದ ಯಜಮಾನರಿಗೂ ವಿಶೇಷ ಬಹುಮಾನ, ನಗದು ಪುರಸ್ಕಾರವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಐಕಳ ಬಾವ ಕಂಬಳದ ಕಾರ್ಯಾಧ್ಯಕ್ಷ ಚಿತ್ತರಂಜನ್ ಭಂಡಾರಿ, ಮುಂಬೈ ಸಮಿತಿ ಅಧ್ಯಕ್ಷ ಕುಶಾಲ್ ಭಂಡಾರಿ, ಐಕಳ ಬಾವ ಕಂಬಳದ ಪ್ರಧಾನ ಕಾರ್ಯದರ್ಶಿ ಸ್ವರಾಜ್ ಶೆಟ್ಟಿ ದೊಡ್ಡಮನೆ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ, ತಿಲಕ್‌ರಾಜ್ ಬಲ್ಲಾಳ್, ಪ್ರದೀಪ್ ಕುಮಾರ್ ಐಕಳಬಾವ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

13 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

14 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

14 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

16 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

16 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

16 hours ago