ಉಡುಪಿ: ಉಡುಪಿಯ ಮಹಿಳಾ ಉದ್ದಿಮೆದಾರರ ಸಂಘಟನೆ ‘ಪವರ್’ ವತಿಯಿಂದ ಮಹಿಳಾ ಉದ್ಯಮಿಗಳ ಉತ್ಪನ್ನಗಳು ಹಾಗೂ ಕೌಶಲ್ಯಗಳಿಗೆ ವೇದಿಕೆಯಾದ ‘ಪವರ್ ಪರ್ಬ’ ಇದೇ ಫೆ. 7, 8 ಮತ್ತು 9ರಂದು ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಪವರ್ ಸಂಸ್ಥೆಯ ಅಧ್ಯಕ್ಷೆ ತನುಜಾ ಮಾಬೆನ್ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಮಹಿಳಾ ಉದ್ಯಮಿಗಳು ತಯಾರಿಸಿದ ವಸ್ತುಗಳು, ಅವರ ಸಂಸ್ಥೆಯ ಸೇವೆ, ಕೌಶಲ್ಯ, ಪಾಂಡಿತ್ಯವನ್ನು ಗ್ರಾಹಕರೆದುರು ಪ್ರದರ್ಶಿಸಿ ಅವರನ್ನು ಒಗ್ಗೂಡಿಸುವುದು ಪವರ್ ಪರ್ಬದ ಕಲ್ಪನೆಯಾಗಿದೆ ಎಂದರು.
ಫೆ. 7ರಂದು ಸಂಜೆ 4.30ಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಪವರ್ ಪರ್ಬಕ್ಕೆ ಚಾಲನೆ ನೀಡಲಿದ್ದಾರೆ. ಪ್ರಗತಿಪರ ರೈತ ಮಹಿಳೆ ಕವಿತಾ ಮಿಶ್ರಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಎಮ್ಎಸ್ಎಮ್ಇ ಜಂಟಿ ನಿರ್ದೇಶಕ ಕೆ. ಸಾಕ್ರೊಟೀಸ್ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಕೌಶಲಾಭಿವೃದ್ದಿ ಮಳಿಗೆಯನ್ನು ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಪವರ್ ಪರ್ಬದ ಸಂಯೋಜಕಿ ಸುಗುಣಾ ಸುವರ್ಣ ಮಾತನಾಡಿ, ಕೇಂದ್ರ ಸರಕಾರದ ಪಿಎಂಎಸ್ ಸ್ಕೀಮ್ ಆಫ್ ಎಂಎಸ್ಎಂಇ ಸಹಯೋಗದೊಂದಿಗೆ ಈ ಪವರ್ ಪರ್ಬವನ್ನು ಆಯೋಜಿಸಲಾಗುತ್ತಿದ್ದು, ಒಟ್ಟು 150ಕ್ಕೂ ಅಧಿಕ ಮಳಿಗೆಗಳನ್ನು ಮಹಿಳಾ ಉದ್ಯಮಿಗಳಿಗಾಗಿ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ 60 ಮಳಿಗೆಗಳು ಪಿಎಂಎಸ್ ಸ್ಕೀಮ್ ಆಫ್ ಎಂಎಸ್ಎಂಇ ಮಳಿಗೆಗಳಾಗಿರುತ್ತವೆ ಎಂದರು.
ಆಭರಣ, ಆಹಾರ, ಚಿತ್ರಕಲೆ, ಕರಕೌಶಲ್ಯ, ವಸ್ತ್ರ ವಿನ್ಯಾಸ, ಗೃಹಾಲಂಕಾರ, ಸೌಂದರ್ಯ ವರ್ಧಕಗಳು, ಕ್ರಿಯಾತ್ಮಕ ವಸ್ತುಗಳು ಮೊದಲಾದ ವಸ್ತುಗಳ ಮಳಿಗೆ ಇರಲಿದೆ. ಈ ಪವರ್ ಪರ್ಬದ ಪ್ರಚಾರದ ಭಾಗವಾಗಿ ಫೆ.5ರಂದು ಸಂಜೆ 4.30ಕ್ಕೆ ರಜತಾದ್ರಿ ಮಣಿಪಾಲದಿಂದ ಉಡುಪಿಯವರೆಗೆ ಕಾರು ಮತ್ತು ಬೈಕ್ ರ್ಯಾಲಿ ಆಯೋಜಿಸಲಾಗಿದೆ. ಪವರ್ ನ ಸದಸ್ಯರು ಮತ್ತು ಪ್ರದರ್ಶಕರು ಈ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಸಂಘಟನಾ ಕಾರ್ಯದರ್ಶಿ ಪ್ರಿಯಾ ಕಾಮತ್, ಕೋಶಾಧಿಕಾರಿ ಪುಷ್ಪಾ ಜಿ.ರಾವ್, ನೋಂದಣಿ ಸಂಯೋಜಕಿ ಸುಪ್ರಿಯಾ ಕಾಮತ್, ಸ್ಥಾಪಕ ಅಧ್ಯಕ್ಷ ರೇಣು ಜಯರಾಮ್, ನಿಕಟ ಪೂರ್ವ ಅಧ್ಯಕ್ಷರಾದ ತಾರಾ ತಿಮ್ಮಯ್ಯ, ಸುವರ್ಷಾ ಮಿಂಚ್, ಶೃತಿ ಶೆಣೈ ಉಪಸ್ಥಿತರಿದ್ದರು.
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…