Featured

ಫೆ. 7, 8ರಂದು ಐಕಳಬಾವ ಕಂಬಳ ಸುವರ್ಣ ಮಹೋತ್ಸವ; ಕಂಬಳ ರತ್ನ ಪ್ರಶಸ್ತಿಗೆ ಡಾ| ರಾಜೇಂದ್ರ ಕುಮಾರ್ ಆಯ್ಕೆ – vishwanews24

ಫೆ. 7, 8ರಂದು ಐಕಳಬಾವ ಕಂಬಳ ಸುವರ್ಣ ಮಹೋತ್ಸವ; ಕಂಬಳ ರತ್ನ ಪ್ರಶಸ್ತಿಗೆ ಡಾ| ರಾಜೇಂದ್ರ ಕುಮಾರ್ ಆಯ್ಕೆ

ಮಂಗಳೂರು: ಐಕಳಬಾವ ಕಾಂತಾಬಾರೆ ಬೂದಾಬಾರೆ ಕಂಬಳ ಈ ಬಾರಿ ಸುವರ್ಣ ಮಹೋತ್ಸವ ಆಚರಿಸುತ್ತಿದ್ದು ಫೆ. 7, 8ರಂದು ಕಂಬಳ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಇದೇ ಸಂದರ್ಭ ನಾಗಾಲಯ, ಬ್ರಹ್ಮಸ್ಥಾನ ಸಹಿತ ಪರಿವಾರ ಶಕ್ತಿಗಳ ಶಿಲಾಮಯ ಗುಡಿಯ ಸ್ಥಾಪನೆಯೊಂದಿಗೆ ಬ್ರಹ್ಮಕಲಶೋತ್ಸವ, ದೈವಗಳ ಪುನರ್‌ಪ್ರತಿಷ್ಠಾಪನೆ ನಡೆಯಲಿದೆ.
ಫೆ. 7ರಂದು ಬೆಳಗ್ಗೆ 8ಕ್ಕೆ ಕರೆ ಮೂಹೂರ್ತ ನಡೆಯಲಿದ್ದು 9.30ಕ್ಕೆ ಚಂದ್ರಶೇಖರ ಸ್ವಾಮೀಜಿಯವರು ಚಾಲನೆ ನೀಡಲಿದ್ದಾರೆ. ಒರಿಸ್ಸಾ ಹೈಕೋರ್ಟ್‌ ನ್ಯಾಯಾಧೀಶ ಕೃಷ್ಣ ದೀಕ್ಷಿತ್, ಮೂಲ್ಕಿ ಅರಸರಾದ ದುಗ್ಗಣ್ಣ ಸಾವಂತರು, ಕಟೀಲು ದೇಗುಲದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ವಂಣ ಒಸ್ವಾಲ್ಡ್ ಮೊಂತೇರೋ, ಕಾಪು ಮಾರಿಯಮ್ಮ ದೇವಸ್ಥಾನದ ಧರ್ಮದರ್ಶಿ ಕೆ. ವಾಸುದೇವ ಶೆಟ್ಟಿ, ಐಕಳ ಪಂಚಾಯತ್ ಅಧ್ಯಕ್ಷ ದಿವಾಕರ ಚೌಟ, ಐಕಳ ಫ್ಯಾಮಿಲಿ ವೆಲ್‌ಫೇರ್‌ಟ್ರಸ್ಟ್ ನ ಅಧ್ಯಕ್ಷ ಕೆ.ಪಿ.ಕೆ. ಹೆಗ್ಡೆ ಭಾಗವಹಿಸಲಿದ್ದಾರೆ. ಸಂಜೆಯ ಸಭಾ ಕಾರ್ಯಕ್ರಮವನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಸ್ಪೀಕರ್ ಯು.ಟಿ ಖಾದರ್,ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕೇಂದ್ರ ಸಚಿವರಾದ ಎಚ್.ಡಿ. ಕುಮಾರ ಸ್ವಾಮಿ, ಸಚಿವರಾದ ದಿನೇಶ್ ಗುಂಡೂ ರಾವ್, ಜಮೀರ್‌ಅಹಮದ್ ಖಾನ್, ಸಂತೋಷ್ ಲಾಡ್, ಎಂ.ಆ.ಜಿ. ಗ್ರೂಪ್ ಚೇರ್ಮನ್ ಪ್ರಕಾಶ್ ಶೆಟ್ಟಿ, ಸಂಸದ ಕ್ಯಾಣ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಶೆಟ್ಟಿ ಐಕಳ, ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಕಿಶೋರ್‌ಅಲ್ಪ ಭಾಗವಹಿಸಲಿದ್ದಾರೆ.

ಇದನ್ನೂ ಓದಿ👇

ಮುಂಬಯಿ ಸಮಿತಿಯ ಅಧ್ಯಕ್ಷ ಕುಶಲ ಭಂಡಾರಿ ಮಾತನಾಡಿದರು. ಈ ಸಂದರ್ಭ ಸಮಿತಿಯ ಕಾರ್ಯಾಧ್ಯಕ್ಷ ಚಿತ್ತರಂಜನ್ ಭಂಡಾರಿ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ಒಡುಹಿತ್ತು, ಪ್ರಧಾನಕಾರ್ಯದರ್ಶಿ ಸ್ವರಾಜ್ ಶೆಟ್ಟಿ ಮುಂಡೂರು ದೊಡ್ಡಮನೆ, ಮುರಳೀಧರ ಶೆಟ್ಟಿ ಐಕಳಬಾವ, ಲೋಕೇಶ್ ಮುಚ್ಚಾರು, ಅಮರನಾಥ್, ಸುಕುಮಾರ್‌ಭಂಡಾರಿ, ಸುರೇಶ್ ಕೊಂಡೆ, ಪ್ರಮೋದ್ ಕುಮಾರ್‌ಐಕಳಬಾವ, ಪ್ರದೀಪ್ ಕುಮಾರ್‌, ಲವ ಶೆಟ್ಟಿ ಕಿನ್ನಿಗೋಳಿ, ಉದಯ ಶೆಟ್ಟಿ, ರವಿರಾಜ್ ಶೆಟ್ಟಿ, ಲೀಲಾಧರ ಶೆಟ್ಟಿ, ಸುಧಾಮ ಶೆಟ್ಟಿ, ದಯೇಶ್ ಐಕಳ, ಶ್ರೀಶ ಸರಫ್ ಐಕಳ, ಶರತ್ ಶೆಟ್ಟಿ ಸ್ಥಳಂತಗುತ್ತು ಮತ್ತಿತರರು ಉಪಸ್ಥಿತರಿದ್ದರು.

ಕಂಬಳ ರತ್ನ’ ಪ್ರಶಸ್ತಿ
ಕಂಬಳ್ಳೋತ್ಸವದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾಣ ಎಂ.ಎನ್. ರಾಜೇಂದ್ರ ಕುಮಾರ್‌ಅವರಿಗೆ “ಕಂಬಳ ರತ್ನ’ ಪ್ರಶಸ್ತಿ ನೀಡಲಾಗುವುದು.

ಇದನ್ನೂ ಓದಿ 👇

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago