Featured

ಫೆ. 9ರಿಂದ 18ರವರೆಗೆ ಧರ್ಮಸ್ಥಳದ ಬಾಹುಬಲಿಗೆ ಮಹಾಮಸ್ತಕಾಭಿಷೇಕ – Vishwanews24

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ 39 ಅಡಿ ಎತ್ತರದ ಭಗವಾನ್‌ ಬಾಹುಬಲಿ ಮೂರ್ತಿಗೆ ನಾಲ್ಕನೇ ಮಹಾಮಸ್ತಕಾಭಿಷೇಕ 2019ರ ಫೆ.9ರಿಂದ 18ರವರೆಗೆ ನಡೆಯಲಿದೆ ಎಂದು ಬಾಹುಬಲಿ ಮೂರ್ತಿ ಪ್ರತಿಷ್ಠಾಪಕ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಬುಧವಾರ ಪ್ರಕಟಿಸಿದರು.  ಧ ಈ ಐತಿಹಾಸಿಕ ಕ್ಷಣಕ್ಕೆ ಧರ್ಮಸ್ಥಳ ಸಾಕ್ಷಿಯಾಗಲಿದೆ.

ಧರ್ಮಸ್ಥಳದ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಪರಮಪೂಜ್ಯ108 ಆಚಾರ್ಯ ಶ್ರೀ ವರ್ಧಮಾನ ಸಾಗರ ಮುನಿಮಹಾರಾಜರ ನೇತೃತ್ವದಲ್ಲಿ, ಪೂಜ್ಯ 108 ಆಚಾರ್ಯ ಶ್ರೀಪುಷ್ಪದಂತ ಸಾಗರ ಮುನಿಮಹಾರಾಜರ ಉಪಸ್ಥಿತಿಯಲ್ಲಿ ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕರ ಮಾರ್ಗದರ್ಶನದಲ್ಲಿ ಮಹಾಮಸ್ತಕಾಭಿಷೇಕ ನಡೆಯಲಿದೆ.

ಮಸ್ತಕಾಭಿಷೇಕ ಸಂದರ್ಭ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಮಾರಂಭಕ್ಕೆ ಬರಲು ಒಪ್ಪಿದ್ದಾರೆ. ರಾಜ್ಯಪಾಲರು, ಮುಖ್ಯಮಂತ್ರಿ, ಇತರ ಸಚಿವರನ್ನು ಆಹ್ವಾನಿಸಲಾಗಿದೆ. ಸರಕಾರ ಕಾರ್ಯಕ್ರಮಕ್ಕೆ ವಿಶೇಷ ಸಹಯೋಗ-ಸಹಕಾರ ನೀಡುತ್ತಿದೆ. ಸರಕಾರ ಮಹಾಮಸ್ತಕಾಭಿಷೇಕಕ್ಕೆ ವಿಶೇಷ ನೆರವು ನೀಡಿದೆ. ರಸ್ತೆ ಕಾಮಗಾರಿ ಭರದಿಂದ ಸಾಗುತ್ತಿದೆ ಎಂದರು.

ನಿತ್ಯವೂ ಪೂಜೆ, ಆರಾಧನೆಗಳು 
ಫೆ.9ರಂದು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜೆಯ ಬಳಿಕ ರತ್ನಗಿರಿಗೆ ಆಗ್ರೋದಕ ಮೆರವಣಿಗೆಯೊಂದಿಗೆ ಮಹಾಮಸ್ತಕಾಭಿಷೇಕದ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಫೆ.16ರಂದು ಬೆಳಗ್ಗೆೆ 8.45ರ ಮೀನಲಗ್ನದ ಮುಹೂರ್ತದಲ್ಲಿ ಬಾಹುಬಲಿ ಸ್ವಾಮಿಗೆ 1008 ಪುಣ್ಯಾಮೃತ ಕಲಶಗಳಿಂದ ವಿಗ್ರಹ ಪ್ರತಿಷ್ಠಾಪಕ ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರಿಂದ ಪ್ರಥಮ ಮಸ್ತಕಾಭಿಷೇಕ ನಡೆಯಲಿದೆ. ಸಂಜೆ ಧ್ವಜಪೂಜೆ, ಶ್ರೀ ಬಲಿ ವಿಧಾನ, ಮಹಾಮಂಗಳಾರತಿ ನಡೆಯಲಿದೆ.

ಫೆ.11ರಂದು ಬಾಹುಬಲಿ ಪಂಚಮಹಾವೈಭವ ನಿಮಿತ್ತ ಬೆಳಗ್ಗೆೆ 9.30ರಿಂದ ನವಯುಗಾರಂಭ. ಸಂಜೆ 4.30ರಿಂದ ಬಾಲಲೀಲೋತ್ಸವ.

12ರಂದು ಬೆಳಗ್ಗೆೆ ಆದಿನಾಥ ಮಹಾರಾಜರಿಂದ ಸ್ತ್ರೀ ಶಿಕ್ಷಣ, ಕಲೆ, ಸಂಸ್ಕೃತಿ. ಸಂಜೆ ಭೋಗದಿಂದ ತ್ಯಾಾಗದೆಡೆಗೆ.

13ರಂದು ಬೆಳಗ್ಗೆೆ ಚಕ್ರರತ್ನ ಉದಯ, ದಿಗ್ವಿಜಯ. ಸಂಜೆ ವೈಭವದ ಮೆರವಣಿಗೆಯೊಂದಿಗೆ ವೃಷಭಾಚಲದಿಂದ ಅಯೋಧ್ಯೆೆಗೆ ಪಯಣ.

14ರಂದು ಭರತ ಮತ್ತು ಬಾಹುಬಲಿ ಧರ್ಮಯುದ್ಧ. ಸಂಜೆ ಬಾಹುಬಲಿಯ ತ್ಯಾಾಗ ತಪಸ್ಸು.

15ರಂದು ಬೆಳಗ್ಗೆೆ ಸಮವಸರಣ ವೈಭವ, ಸಂಜೆ ಬಾಹುಬಲಿ ಕೇವಲ ಜ್ಞಾನ ನಡೆಯಲಿದೆ.

ಫೆ.16, 17, 18ರಂದು ಬಾಹುಬಲಿ ಸ್ವಾಮಿಗೆ 1008 ಕಲಶಗಳಿಂದ ಮಹಾಮಸ್ತಕಾಭಿಷೇಕ ನಡೆಯಲಿದೆ.

ಫೆ.18ರಂದು ಮಧ್ಯಾಹ್ನ ನಂತರ ಧ್ವಜಾವರೋಹಣ, ತೋರಣವಿಸರ್ಜನೆ ನಡೆಯಲಿದೆ.

ಭಗವಾನ್‌ ಶ್ರೀ ಬಾಹುಬಲಿ ಪಂಚಮಹಾವೈಭವ:

ಸಾಂಪ್ರದಾಯಿಕವಾಗಿ ಐದು ದಿನ ತೀರ್ಥಂಕರರ ಪಂಚಕಲ್ಯಾಣ ಕಾರ್ಯಕ್ರಮ ನಡೆಸಿ ಬಾಹುಬಲಿ ಮಹಾಮಸ್ತಕಾಭಿಷೇಕ ನಡೆಸಲಾಗುತ್ತದೆ. ಆದರೆ ಬಾಹುಬಲಿಯೇ ನಾಯಕನಾಗಿರುವುದರಿಂದ ಆತನ ಜೀವನ, ಸಾಧನೆ, ಸಂಯಮ, ತ್ಯಾಗ ಮತ್ತು ಅಹಿಂಸೆ ಪ್ರತಿಬಿಂಬಿಸುವ ಬಾಹುಬಲಿ ಪಂಚ ಮಹಾ ವೈಭವವನ್ನು ಸಾದರಪಡಿಸಲಾಗುವುದು ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago