Featured

ಫೇಸ್ಬುಕ್ ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ : ಕುತ್ತಾರು ಆಡಳಿತ ಮಂಡಳಿಯಿಂದ ದೂರು ದಾಖಲು – vishwanews24

ಶ್ರೀ ಕ್ಷೇತ್ರದಲ್ಲಿ ಯಾವುದೇ ಆನ್ಲೈನ್ ಸೇವೆಯಾಗಲಿ ಆನ್ಲೈನ್ ಮುಖಾಂತರ ದೇಣಿಗಿಯಾಗಲಿ ಸಂಗ್ರಹಿಸುವುದಿಲ್ಲ : ಕುತ್ತಾರು ಆಡಳಿತ ಮಂಡಳಿ

ಕುತ್ತಾರು ಶ್ರೀ ಕೊರಗಜ್ಜ ದೈವದ ಆದಿ ಸ್ಥಳಗಳ ಆಡಳಿತ ಮಂಡಳಿಯ ಸುಪರ್ದಿಯಲ್ಲಿ ನಡೆಯುವಂತಹ ಎಲ್ಲ ಕಾರ್ಯಕ್ರಮಗಳು ಭಕ್ತಾದಿಗಳ ಸಮ್ಮುಖದಲ್ಲಿ ಕ್ರಮಬದ್ಧವಾಗಿ ನಡೆಯುತ್ತಿದ್ದು ಇದರ ವಿರುದ್ಧ “ಡಿವೋಟಿಸ್ ಆಫ್ ಕುತ್ತಾರು ಕೊರಗಜ್ಜ” ಎಂಬ ಶಿರೋನಾಮೆಯಲ್ಲಿ ಖಾತೆ ತೆರೆದು ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸುತ್ತಿರುವ ಕುರಿತು ಈ ಸಂಸ್ಥೆಯ ವಿರುದ್ಧ ದೂರು ದಾಖಲಿಸಲಾಗಿದೆ.

ಕುತ್ತಾರು ಆದಿಸ್ಥಳದ ಕೊರಗಜ್ಜನ ಆಡಳಿತ ಮಂಡಳಿಯು ಯಾವುದೇ ಉದ್ದೇಶಕ್ಕಾಗಿ ಆನ್ ಲೈನ್ ಮುಖಾಂತರ ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸುವುದಿಲ್ಲ. ಕೊರಗಜ್ಜ ದೈವದ ಮೇಲೆ ಸಾರ್ವಜನಿಕರಿಗೆ ಇರುವ ಭಕ್ತಿಯನ್ನೇ ಪ್ರಧಾನವಾಗಿರಿಸಿಕೊಂಡು “ಡಿವೋಟಿಸ್ ಆಫ್ ಕುತ್ತಾರು ಕೊರಗಜ್ಜ” ಎಂಬ ಫೇಸ್ಬುಕ್ ಖಾತೆಯಲ್ಲಿ ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸಿ ಸಾರ್ವಜನಿಕರಿಗೆ ತಪ್ಪು ಮಾಹಿತಿಯನ್ನು ನೀಡುತ್ತಿರುವುದು ಬಹಳ ವಿಷಾದನೀಯ ಸಂಗತಿ.

ಶ್ರೀ ಕ್ಷೇತ್ರದಲ್ಲಿ ಯಾವುದೇ ಆನ್ಲೈನ್ ಸೇವೆಯಾಗಲಿ ಆನ್ಲೈನ್ ಮುಖಾಂತರ ದೇಣಿಗಿಯಾಗಲಿ ಸಂಗ್ರಹಿಸುವುದಿಲ್ಲ. ಶ್ರೀ ಕ್ಷೇತ್ರದಲ್ಲಿ ಆಡಳಿತ ಮಂಡಳಿಯ ಶಿರೋನಾಮೆಯ ಅಡಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಯಾವುದೇ ರೀತಿಯಾದಂತಹ ಪ್ರಕಟನೆಗಳು ಬಂದಲ್ಲಿ ಇಂತಹ ಮನವಿಗೆ ಸ್ಪಂದಿಸಬಾರದಾಗಿ ಭಕ್ತರಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ. ತಪ್ಪು ಮಾಹಿತಿ ನೀಡಿ ಸಾರ್ವಜನಿಕರ ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿರುವುದರಿಂದ ಶ್ರೀ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಉಂಟು ಮಾಡಿದಂತಾಗಿದೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಶ್ರೀ ಕ್ಷೇತ್ರದ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವುದು ಕೂಡ ಕಾನೂನು ಬಾಹಿರವಾಗಿರುತ್ತದೆ. ಶ್ರೀ ಕ್ಷೇತ್ರದಲ್ಲಿ ನಡೆಯುವಂತಹ ಎಲ್ಲ ರೀತಿಯ ಸೇವೆಗೆ ಭಕ್ತರಿಗೆ ಆಡಳಿತ ಮಂಡಳಿಯಿಂದ ಕಡ್ಡಾಯವಾಗಿ ರಶೀದಿಯನ್ನು ನೀಡಲಾಗುತ್ತಿದೆ. ಆದುದರಿಂದ ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಸುಳ್ಳು ಮಾಹಿತಿಯನ್ನು ಸಾರ್ವಜನಿಕರು ಹಾಗೂ ಭಕ್ತರು ನಂಬಬಾರದಾಗಿ ಕ್ಷೇತ್ರ ಆಡಳಿತ ಮಂಡಳಿ ವಿನಂತಿಸಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago