ಉಡುಪಿ: ಕೋವಿಡ್-19 ನಿಯಂತ್ರಣದ ಸುರಕ್ಷತಾ ಕ್ರಮ ಅನುಸರಿಸಿ, ಅಜ್ಜರಕಾಡು ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಆ. 15ರಂದು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸುವವರನ್ನು ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಮೂಲಕ ಪರಿಶೀಲಿಸಲು, ಸ್ಯಾನಿಟೈಸರ್ ವ್ಯವಸ್ಥೆ, ಸಾಮಾಜಿಕ ಅಂತರದಲ್ಲಿ ಆಸನ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದು, ಜತೆಗೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.
ಕಾರ್ಯಕ್ರಮವನ್ನು ವೆಬ್ ಕಾಸ್ಟಿಂಗ್ ಮೂಲಕ ನೇರ ಪ್ರಸಾರ ಮಾಡುವುದು ಸೇರಿದಂತೆ ಫೇಸ್ಬುಕ್ ಲೈವ್ ಹಾಗೂ ಆನ್ಲೈನ್ ಮೂಲಕ ಸಾರ್ವಜನಿಕರಿಗೆ ನೇರವಾಗಿ ತಲುಪುವಂತೆ ಎನ್.ಐ.ಸಿ. ಮೂಲಕ ಅಗತ್ಯ ಕ್ರಮ ಕೈಗೊಳ್ಳ ಲಾಗಿದೆ. ಕಾರ್ಯಕ್ರಮದ ಲಿಂಕ್ನ್ನು ಸಾಕಷ್ಟು ಮುಂಚಿತವಾಗಿ ಸಾರ್ವಜನಿಕರಿಗೆ ನೀಡುವಂತೆ ಡಿಸಿ ಅಧಿಕಾರಿಗಳಿಗೆ ಆದೇಶ ನೀಡಿದರು.
ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿವಿಧ ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿ, ಜವಾಬ್ದಾರಿ ಹಂಚಿಕೆ ಮಾಡಲಾಯಿತು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನ್ಕರ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…