ಉಡುಪಿ: ಕೋವಿಡ್-19 ನಿಯಂತ್ರಣದ ಸುರಕ್ಷತಾ ಕ್ರಮ ಅನುಸರಿಸಿ, ಅಜ್ಜರಕಾಡು ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಆ. 15ರಂದು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸುವವರನ್ನು ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಮೂಲಕ ಪರಿಶೀಲಿಸಲು, ಸ್ಯಾನಿಟೈಸರ್ ವ್ಯವಸ್ಥೆ, ಸಾಮಾಜಿಕ ಅಂತರದಲ್ಲಿ ಆಸನ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದು, ಜತೆಗೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.
ಕಾರ್ಯಕ್ರಮವನ್ನು ವೆಬ್ ಕಾಸ್ಟಿಂಗ್ ಮೂಲಕ ನೇರ ಪ್ರಸಾರ ಮಾಡುವುದು ಸೇರಿದಂತೆ ಫೇಸ್ಬುಕ್ ಲೈವ್ ಹಾಗೂ ಆನ್ಲೈನ್ ಮೂಲಕ ಸಾರ್ವಜನಿಕರಿಗೆ ನೇರವಾಗಿ ತಲುಪುವಂತೆ ಎನ್.ಐ.ಸಿ. ಮೂಲಕ ಅಗತ್ಯ ಕ್ರಮ ಕೈಗೊಳ್ಳ ಲಾಗಿದೆ. ಕಾರ್ಯಕ್ರಮದ ಲಿಂಕ್ನ್ನು ಸಾಕಷ್ಟು ಮುಂಚಿತವಾಗಿ ಸಾರ್ವಜನಿಕರಿಗೆ ನೀಡುವಂತೆ ಡಿಸಿ ಅಧಿಕಾರಿಗಳಿಗೆ ಆದೇಶ ನೀಡಿದರು.
ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿವಿಧ ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿ, ಜವಾಬ್ದಾರಿ ಹಂಚಿಕೆ ಮಾಡಲಾಯಿತು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನ್ಕರ್ ಮತ್ತಿತರರು ಉಪಸ್ಥಿತರಿದ್ದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…