ದಾವಣಗೆರೆ: ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ನಿವಾಸಿ ಪುಷ್ಪಲತ (46) ಅತ್ಮಹತ್ಯೆಗೆ ಶರಣಾದ ಶಿಕ್ಷಕಿ ಎಂದು ತಿಳಿದು ಬಂದಿದೆ. ಅವರು ತುಂಗಾಭದ್ರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊನ್ನಾಳಿಯಲ್ಲಿ ಮನೆ ಕಟ್ಟಲು ಶಿವಮೊಗ್ಗ ಮೂಲದ ಖಾಸಗಿ ಮೈಕ್ರೋ ಫೈನಾನ್ಸ್ ಹಾಗೂ ಕೈಗಡವಾಗಿ ಲಕ್ಷಾಂತರ ರೂ. ಸಾಲ ಮಾಡಿದ್ದರು.
ಸರಿಯಾಗಿ ಪಾವತಿ ಮಾಡದ ಹಿನ್ನೆಲೆ 20 ದಿನಗಳ ಹಿಂದೆ ಪುಷ್ಪಲತ ದಂಪತಿ ವಿರುದ್ಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಫೈನಾನ್ಸ್ ಸಿಬ್ಬಂದಿ ದೂರು ನೀಡಿದ್ದರು. ದೂರು ದಾಖಲಾದ ಬಳಿಕ ಹೊನ್ನಾಳಿ ಠಾಣೆ ಪೊಲೀಸರು ಫೈನಾನ್ಸ್ ಕಂಪನಿಯಿಂದ ಮುಚ್ಚಳಿಕೆ ಬರೆಸಿಕೊಂಡಿದ್ದರು. ಸೋಮವಾರ ಬೆಳಗಿನ ಜಾವ ತುಂಗಾಭದ್ರ ನದಿಗೆ ಹಾರಿ ಅವರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
ತುಂಗಭದ್ರಾ ನದಿಗೆ ಪುಷ್ಪಲತ ಹಾರಲು ಹೊರಟಿರುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ನದಿ ದಂಡೆಯ ಬಳಿ ಕುಳಿತು ಆಳವಾಗಿ ಯೋಚಿಸಿ ನದಿಗೆ ದುಮುಕಿದ್ದಾರೆ. ಈ ದೃಶ್ಯ ರಾಘವೇಂದ್ರಸ್ವಾಮಿ ಮಠದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿಕ್ಷಕಿಯ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…