ಫೈನಾನ್ಸ್ ಸಿಬ್ಬಂದಿ ಕಿರುಕುಳ : ಡೆತ್ನೋಟ್ ಬರೆದಿಟ್ಟು ಯುವಕ ನೇಣಿಗೆ ಶರಣು
ದಾವಣಗೆರೆ: ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವುದು ನ್ಯಾಮತಿ ತಾಲೂಕಿನ ಮಾಚಿಗೊಂಡನಹಳ್ಳಿಯಲ್ಲಿ ನಡೆದಿದೆ.
ಯಶವಂತ್ ನಾಯ್ಕ (24) ನೇಣಿಗೆ ಶರಣಾದ ಯುವಕ. ಈತ ಶಿವಮೊಗ್ಗದ ಫೈನಾನ್ಸ್ ಒಂದರಲ್ಲಿ 5 ಲಕ್ಷ ರೂ. ಸಾಲ ಪಡೆದಿದ್ದ. ಸಾಲ ಕಟ್ಟಲಿಲ್ಲ ಎಂದರೆ ಮನೆ ಜಪ್ತಿ ಮಾಡುವುದಾಗಿ ಖಾಸಗಿ ಪೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದರು. ಇನ್ನೊಂದು ಕಡೆ ಬೈಕ್ ಅಡವಿಟ್ಟು ಶಿವಮೊಗ್ಗದ ವ್ಯಕ್ತಿಯೊಬ್ಬರ ಬಳಿ 40 ಸಾವಿರ ರೂ. ಸಾಲ ಮಾಡಿದ್ದ. ಸಾಲ ಕಟ್ಟದ ಹಿನ್ನೆಲೆ ಮನೆ ಮುಂದೆ ಬಂದು ಅವರು ಗಲಾಟೆ ಮಾಡಿದ್ದರು. ಇದರ ಜೊತೆ ಖಾಸಗಿ ಫೈನಾನ್ಸ್ ಸಿಬ್ಬಂದಿ ಸಹ ಕಿರುಕುಳ ನೀಡುತ್ತಿದ್ದರು ಎಂದು ಯುವಕನ ತಾಯಿ ಆರೋಪಿಸಿದ್ದಾರೆ.
ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಮೃತ ಯುವಕನ ತಾಯಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆಗೆ ಮುಂದಾಗಿದ್ದಾರೆ.
ಡೆತ್ನೋಟ್ನಲ್ಲಿ ಏನಿದೆ?
ಸಾಲಗಾರರ ಕಿರುಕುಳಕ್ಕಾಗಿ ಸಾಯುತ್ತಿದ್ದೇನೆ. ಅಪ್ಪ ನೀನು ಅಂದು ಕೊಂಡಂತೆ ನಾನು ದುಡ್ಡು ಹಾಳು ಮಾಡಿಲ್ಲ. ಈ ಕೇಸ್ನಲ್ಲಿ ನಾನು ಇಷ್ಟಪಡುತ್ತಿದ್ದ ಹುಡುಗಿಯನ್ನು ಎಳೆದು ತರಬೇಡಿ. ಅವಳು ಎಲ್ಲಿದ್ದರೂ ಚೆನ್ನಾಗಿರಬೇಕು. ಅವಳು ನನ್ನ ಮೇಲೆ ಪ್ರಾಣವನ್ನೇ ಇಟ್ಟುಕೊಂಡಿದ್ದಳು ಎಂದು ಬರೆದಿದ್ದಾನೆ. ಅಲ್ಲದೇ, ತಾನು ಮಾಡಿದ್ದ ಸಾಲದ ಬಗ್ಗೆ ಬರೆದು, ದಯವಿಟ್ಟು ನನ್ನನ್ನು ಕ್ಷಮಿಸಿ ಅಪ್ಪ ಅಮ್ಮ ಎಂದು ಉಲ್ಲೇಖಿಸಿದ್ದಾನೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…