ಫೈನಾನ್ಸ್ ಸಿಬ್ಬಂದಿ ಕಿರುಕುಳ : ಡೆತ್ನೋಟ್ ಬರೆದಿಟ್ಟು ಯುವಕ ನೇಣಿಗೆ ಶರಣು
ದಾವಣಗೆರೆ: ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವುದು ನ್ಯಾಮತಿ ತಾಲೂಕಿನ ಮಾಚಿಗೊಂಡನಹಳ್ಳಿಯಲ್ಲಿ ನಡೆದಿದೆ.
ಯಶವಂತ್ ನಾಯ್ಕ (24) ನೇಣಿಗೆ ಶರಣಾದ ಯುವಕ. ಈತ ಶಿವಮೊಗ್ಗದ ಫೈನಾನ್ಸ್ ಒಂದರಲ್ಲಿ 5 ಲಕ್ಷ ರೂ. ಸಾಲ ಪಡೆದಿದ್ದ. ಸಾಲ ಕಟ್ಟಲಿಲ್ಲ ಎಂದರೆ ಮನೆ ಜಪ್ತಿ ಮಾಡುವುದಾಗಿ ಖಾಸಗಿ ಪೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದರು. ಇನ್ನೊಂದು ಕಡೆ ಬೈಕ್ ಅಡವಿಟ್ಟು ಶಿವಮೊಗ್ಗದ ವ್ಯಕ್ತಿಯೊಬ್ಬರ ಬಳಿ 40 ಸಾವಿರ ರೂ. ಸಾಲ ಮಾಡಿದ್ದ. ಸಾಲ ಕಟ್ಟದ ಹಿನ್ನೆಲೆ ಮನೆ ಮುಂದೆ ಬಂದು ಅವರು ಗಲಾಟೆ ಮಾಡಿದ್ದರು. ಇದರ ಜೊತೆ ಖಾಸಗಿ ಫೈನಾನ್ಸ್ ಸಿಬ್ಬಂದಿ ಸಹ ಕಿರುಕುಳ ನೀಡುತ್ತಿದ್ದರು ಎಂದು ಯುವಕನ ತಾಯಿ ಆರೋಪಿಸಿದ್ದಾರೆ.
ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಮೃತ ಯುವಕನ ತಾಯಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆಗೆ ಮುಂದಾಗಿದ್ದಾರೆ.
ಡೆತ್ನೋಟ್ನಲ್ಲಿ ಏನಿದೆ?
ಸಾಲಗಾರರ ಕಿರುಕುಳಕ್ಕಾಗಿ ಸಾಯುತ್ತಿದ್ದೇನೆ. ಅಪ್ಪ ನೀನು ಅಂದು ಕೊಂಡಂತೆ ನಾನು ದುಡ್ಡು ಹಾಳು ಮಾಡಿಲ್ಲ. ಈ ಕೇಸ್ನಲ್ಲಿ ನಾನು ಇಷ್ಟಪಡುತ್ತಿದ್ದ ಹುಡುಗಿಯನ್ನು ಎಳೆದು ತರಬೇಡಿ. ಅವಳು ಎಲ್ಲಿದ್ದರೂ ಚೆನ್ನಾಗಿರಬೇಕು. ಅವಳು ನನ್ನ ಮೇಲೆ ಪ್ರಾಣವನ್ನೇ ಇಟ್ಟುಕೊಂಡಿದ್ದಳು ಎಂದು ಬರೆದಿದ್ದಾನೆ. ಅಲ್ಲದೇ, ತಾನು ಮಾಡಿದ್ದ ಸಾಲದ ಬಗ್ಗೆ ಬರೆದು, ದಯವಿಟ್ಟು ನನ್ನನ್ನು ಕ್ಷಮಿಸಿ ಅಪ್ಪ ಅಮ್ಮ ಎಂದು ಉಲ್ಲೇಖಿಸಿದ್ದಾನೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…