ಬೆಂಗಳೂರು : ಎನ್.ಬಿ.ಸಿ ಕೋಡ್ (National Building Code) ಪ್ರಕಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಒಂದೇ ನಿಯಮ ಇದೆ ಹಾಗಾಗಿ ತಾರತಮ್ಯ ಮಾಡದೇ ಸರ್ಕಾರಿ ಆಸ್ಪತ್ರೆಗೆ ಫೈರ್ ಕ್ಲಿಯರೆನ್ಸ್ ಗೆ ಎಷ್ಟು ಸಮಯವಕಾಶ ನೀಡಲಾಗುತ್ತಿದೆಯೊ ಖಾಸಗಿ ಆಸ್ಪತ್ರೆಗಳಿಗೂ ಅಷ್ಟೇ ಸಮಯವಕಾಶ ನೀಡಿ, ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚು ಕಾಲಾವಕಾಶ ನೀಡಿ ಖಾಸಗಿ ಆಸ್ಪತ್ರೆಗಳಿಗೆ ಕಡಿಮೆ ಕಾಲಾವಕಾಶ ನೀಡಲಾಗುತ್ತಿದೆ ಎಂದು ಸೋಮವಾರ ವಿಧಾನ ಪರಿಷತ್ತಿನಲ್ಲಿ ನಡೆದ 156 ನೇ ಅಧಿವೇಶನ ದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಕೇಳಿದರು.
ಕರ್ನಾಟಕ ರಾಜ್ಯದಲ್ಲಿ 2878 ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ 14 ಮಾತ್ರ ಫೈರ್ ಕ್ಲಿಯರೆನ್ಸ್ ಆಗಿದೆ ಅಂದರೆ ಶೇ 00.5% ಮಾತ್ರ, 5850 ಖಾಸಗಿ ಆಸ್ಪತ್ರೆಗಳಲ್ಲಿ 315 ಮಾತ್ರ ಫೈರ್ ಕ್ಲಿಯರೆನ್ಸ್ ಅಂದರೆ ಶೇ .005% ಮಾತ್ರ ಆಗಿದೆ, ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಫೈರ್ ಸೇಫ್ಟಿ ಕ್ಲಿಯರೆನ್ಸ್ ತೆಗೆದುಕೊಳ್ಳಲು ಎಷ್ಟು ಕಾಲಾವಕಾಶ ಬೇಕು ಎಂದು ಕೇಳಿದರು.
ಕೇವಲ 2 ವರ್ಷದಲ್ಲಿ ರಾಜ್ಯದ 5 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಹಿಂದೆ 2014ರಲ್ಲೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಅಂದಿನ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರು ತೀವ್ರ ನಿಗಾ ಘಟಕದಲಿದ್ದ 28 ನವಜಾತ ಶಿಶುಗಳು ಮತ್ತು 18 ದೊಡ್ಡ ಮಕ್ಕಳನ್ನು ಒಟ್ಟು 46 ಮಕ್ಕಳನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು, 46 ಜೀವಗಳನ್ನು ಉಳಿಸುವ ಜವಾಬ್ದಾರಿ ನಮ್ಮದಾಗಿತ್ತು ಇದರಲ್ಲಿ ಸರ್ಜಿ ಆಸ್ಪತ್ರೆ ಸಫಲ ಆಗಿದೆ, ಆದ್ದರಿಂದ ಮುಂದೆ ಈ ಘಟನೆಗಳು ಮರುಕಳಿಸದಂತೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಫೈರ್ ಸೇಫ್ಟಿ ಕ್ಲಿಯರೆನ್ಸ್ ಮಾಡಬೇಕು ಎಂದು ಒತ್ತಾಯಿಸಿದರು. ಆಯುಷ್ಮಾನ್ ಭಾರತ್ ಯೋಜನೆ ಅಡಿ ಸರ್ಕಾರ 63 ಲಕ್ಷ ರೋಗಿಗಳನ್ನು ಚಿಕಿತ್ಸೆ ನೀಡಿದೆ ಇದರಲ್ಲಿ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಇರುವಂತಹ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸುತ್ತದೆ ಆದರೆ ಕೆ.ಪಿ,ಎಂ.ಎ ಪ್ರಕಾರ ಫೈರ್ ಸೇಫ್ಟಿ ಕ್ಲಿಯರೆನ್ಸ್ ಮಾತ್ರ ಇಲಾಖೆ ಕೊಡುತ್ತಿಲ್ಲ ಇದರಿಂದ ಲಕ್ಷಾಂತರ ರೋಗಿಗಳಿಗೆ ಅನ್ಯಾಯವಾಗುತ್ತಿದೆ ಹಾಗಾಗಿ ನಿಯಮ ಸಡಿಲಿಕರಣಗೊಳಿಸಲು ಮಹರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿ ವೈದ್ಯಕೀಯ ಸಂಸ್ಥೆಗಳಿಗೆ ಪ್ರತ್ಯೇಕ ಅಗ್ನಿ ಸುರಕ್ಷತಾ ಕಾಯ್ದೆಯನ್ನು ತರಲಾಗಿದೆ ಆದ್ದರಿಂದ ಕರ್ನಾಟಕದಲ್ಲೂ ಈ ಕಾಯ್ದೆ ತರವುಂತಾಗಬೇಕು ಎಂದು ಕೋರಿದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…