ನವದೆಹಲಿ,: ಫೋನಿ ಚಂಡಮಾರುತಕ್ಕೆ ಸಿಲುಕಿರುವ ರಾಜ್ಯಗಳ ಸಂಪರ್ಕದಲ್ಲಿ ಕೇಂದ್ರ ಸರ್ಕಾರವಿದೆ. ಇಡೀ ದೇಶವೇ ನಿಮ್ಮೊಂದಿಗೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಹಿಂದೂನ್ನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ತಿಳಿಸಿದ್ದಾರೆ.
ಒಡಿಶಾದ ಕರಾವಳಿ ಭಾಗಕ್ಕೆ ಬಂದು ಅಪ್ಪಳಿಸಿದ ಫೊನಿ ಮಾರುತ ಭಾರಿ ಬಿರುಗಾಳಿ ಸಹಿತ ಮಳೆಯೊಂದಿಗೆ ತನ್ನ ರೌದ್ರ ನರ್ತನವನ್ನು ಮುಂದುವರಿಸುತ್ತಲೇ ಇದೆ. ಗಂಟೆಗೆ ಸುಮಾರು 175 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಚಂಡಮಾರುತ್ತಕ್ಕೆ ಅಕ್ಷರಶಃ ಒಡಿಶಾ ತತ್ತರಿಸಿ ಹೋಗಿದೆ.
ಫೊನಿಯ ಅಬ್ಬರಕ್ಕೆ ಸಿಲುಕಿ ಒಡಿಶಾದ ಹಲವೆಡೆ ಮರಗಳು ಧರೆಗುರುಳಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಿದ್ಯುತ್ ಸಂಪರ್ಕ, ರೈಲು, ವಿಮಾನ ಸಂಚಾರ ಸ್ಥಗಿತಗೊಂಡಿದೆ. ಕೆಲವೆಡೆ ದೂರವಾಣಿ ಸಂಪರ್ಕವೂ ಸ್ಥಗಿತಗೊಂಡಿದೆ. ಬಿರುಗಾಳಿ ಸಹಿತ ಮಳೆಯ ಆರ್ಭಟಕ್ಕೆ ಇದುವರೆಗೂ 5 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ.
ಫೊನಿಯ ಅಬ್ಬರಕ್ಕೆ ಸಿಲುಕಿ ಒಡಿಶಾದ ಹಲವೆಡೆ ಮರಗಳು ಧರೆಗುರುಳಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಿದ್ಯುತ್ ಸಂಪರ್ಕ, ರೈಲು, ವಿಮಾನ ಸಂಚಾರ ಸ್ಥಗಿತಗೊಂಡಿದೆ. ಕೆಲವೆಡೆ ದೂರವಾಣಿ ಸಂಪರ್ಕವೂ ಸ್ಥಗಿತಗೊಂಡಿದೆ. ಬಿರುಗಾಳಿ ಸಹಿತ ಮಳೆಯ ಆರ್ಭಟಕ್ಕೆ ಇದುವರೆಗೂ 2 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಮೊದಲೇ ಚಂಡ ಮಾರುತ ಬಗ್ಗೆ ಮಾಹಿತಿ ತಿಳಿದಿದ್ದರಿಂದ ಜನರನ್ನು ಬೇರೆಡೆ ಸ್ಥಳಾಂತರಿಸುವುದರಿಂದ ಅಪಾರ ಪ್ರಾಣ ಹಾನಿಯಾಗಿಲ್ಲ. ಆದರೆ, ಸಾಕಷ್ಟು ಆಸ್ತಿ ನಷ್ಟ ಉಂಟಾಗಿದೆ. ರಕ್ಷಣಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…