ಕಾಪು: ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್, ಕೆ.ಎಮ್.ಸಿ ರಕ್ತ ನಿಧಿ ಮಣಿಪಾಲ ಮತ್ತು ಜಿಲ್ಲಾಡಳಿತ ಇವರ ನೇತೃತ್ವದಲ್ಲಿ ಸೌತ್ ಕೆನಾರ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಪು ವಲಯ,ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಉಳಿಯಾರು,ಶ್ರೀ ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿ ಕರಂದಾಡಿ,ಜೆಸಿಐ ಕಾಪು,ಲಯನ್ಸ್ ಕ್ಲಬ್ ಇವರ ಜಂಟಿ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾಪು ವೀರಭದ್ರ ಸಭಾಭವನದಲ್ಲಿ ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ “ಫೋಟೋಗ್ರಾಫರ್ಸ್ ಕೇವಲ ವೃತ್ತಿ ಧರ್ಮಕ್ಕೆ ಸೀಮಿತವಾಗದೆ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾಗುವುದು ಹರ್ಷ ತಂದಿದೆ.ಆರೋಗ್ಯಕರ ಜೀವನಕ್ಕೆ ರಕ್ತದಾನ ಅವಶ್ಯಕವಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ SKPA ಇದರ ಅವಿಭಜಿತ ದಕ ಉಡುಪಿಯ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿಗಾರ್ ಮಾತಾಡಿ” ರಕ್ತದಾನ ಮಾಡುವ ಮೊದಲು ಮಾಹಿತಿ ಪಡೆದು ರಕ್ತದಾನ ಮಾಡಬೇಕು, ಹಳ್ಳಿ ಪ್ರದೇಶದಲ್ಲಿ ಕೂಡ ರಕ್ತದಾನ ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕಿದೆ,ಧಾರ್ಮಿಕ ಸಂಘಟನೆಗಳು ಪ್ರಸ್ತುತ ಕಾಲಘಟ್ಟದಲ್ಲಿ ರಕ್ತದಾನ ಶಿಬಿರ ಆಯೋಜಿಸಿಸುವುದು ಮತ್ತು ಭಾಗಿಯಾಗುವುದು ಹೊಸ ಬೆಳವಣಿಗೆ ಎಂದರು.
ಇದೇ ಸಂದರ್ಭದಲ್ಲಿ ಸುಮಾರು 46 ಬಾರಿ ರಕ್ತದಾನ ಮಾಡಿದ ಪ್ರವೀಣ್ ಪೂಜಾರಿ ಕುರ್ಕಾಲು ಅವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತಾಡಿದ ಪ್ರವೀಣ್ ಪೂಜಾರಿ ಮಾತನಾಡುತ್ತಾ ” ಜಾತಿ ಧರ್ಮವನ್ನು ಮೀರಿದ ದಾನ ಇದ್ದರೆ ಅದು ರಕ್ತದಾನ ಮಾತ್ರ,ವಿಶ್ವದಲ್ಲಿ ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲ ಹಾಗಾಗಿ ಸದಾ ಉತ್ಪತ್ತಿಯಾಗುವ ರಕ್ತವನ್ನ ದಾನ ಮಾಡುವುದರಿಂದ ಒಂದು ಜೀವವನ್ನು ಉಳಿಸಲು ಅನುಕೂಲವಾಗುತ್ತೆ ಎಂದರು.
ಪತ್ರಕರ್ತ, ಜೆಸಿಐ ಪೂರ್ವ ವಲಯಧ್ಯಕ್ಷ ರಾಕೇಶ್ ಕುಂಜೂರು ನಿರೂಪಿಸಿದರು,ವೀರೆಂದ್ರ ಶಿರ್ವ ಸ್ವಾಗತಿಸಿದರು, ವರುಣ್ ಶೆಟ್ಟಿ ವಂದಿಸಿದರು
ವೀರೆಂದ್ರ ಎಸ್.ಪೂಜಾರಿ, ಸವಿತಾ ಪೂಜಾರ್ತಿ,ಹರೀಶ್ ಆಚಾರ್ಯ,ವಿನೋದ್ ಕಾಂಚನ್,ವರುಣ್ ಶೆಟ್ಟಿ,ಡಾ
ಫಾತಿಮ ಉಪಸ್ಥಿತಿತರಿದ್ದರು
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…