ಕೇರಳ: ಮೊಬೈಲ್ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ ಕೇರಳದಲ್ಲಿ ನಡೆದಿದೆ.
ಸೂರ್ಯ ಸುರೇಂದ್ರನ್ ಎಂಬ 24 ವರ್ಷದ ಯುವತಿ ಓಲಿಯಾಂಡರ್ ಹೂವು ಸ್ಥಳೀಯವಾಗಿ ಮಲಯಾಳಂ ಭಾಷೆಯಲ್ಲಿ ‘ಅರಳಿ ಪೂ’ ಎಂದು ಕರೆಯಲಾಗುವ ಹೂವು ತಿಂದಿದ್ದಾಳೆ. ವೃತ್ತಿಯಲ್ಲಿ ನರ್ಸ್ ಆಗಿರುವ ಯುವತಿ, ಭಾನುವಾರದಂದು ತನ್ನ ಹೊಸ ಕೆಲಸವನ್ನು ಪ್ರಾರಂಭಿಸಲು ನೆಡುಂಬಸ್ಸೆರಿ ವಿಮಾನ ನಿಲ್ದಾಣದಿಂದ ಗುರುವಾರ ಯುಕೆಗೆ ಪ್ರಯಾಣಿಸಲು ಸಿದ್ಧತೆ ನಡೆಸಿದ್ದಳು. ಆದರೆ ಇದ್ದಕ್ಕಿದ್ದಂತೆ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದ ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಆಕೆಯ ಸಾವಿಗೆ ಕಾರಣ ಹೃದಯಾಘಾತ ಎಂದು ಘೋಷಿಸಲಾಗಿದೆ.
ಅಲಪ್ಪುಳ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಆಕೆಯ ರಕ್ತದಲ್ಲಿ ವಿಷಕಾರಿ ಅಂಶ ಕಂಡುಬಂದಿದೆ. ಆಕೆಯ ಹಠಾತ್ ಸಾವಿನ ಕಾರಣವನ್ನು ಪತ್ತೆ ಹಚ್ಚಲಾಗಿದೆ ಎಂದು ಹರಿಪಾಡ್ ಠಾಣಾಧಿಕಾರಿ ಕೆ.ಅಭಿಲಾಷ್ಕುಮಾರ್ ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅರಳಿ ಹೂವು ಮತ್ತು ಎಲೆ ತಿಂದದ್ದೇ ಸಾವಿಗೆ ಕಾರಣ ಎಂದು ತಿಳಿದು ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಹೊರಡುವ ಮುನ್ನ ಫೋನ್ನಲ್ಲಿ ಮಾತನಾಡುವಾಗ, ಅವಳು ಹೂವನ್ನು ಕಿತ್ತು ಸೇವಿಸಿದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಆಕೆ ನಿರಂತರವಾಗಿ ವಾಂತಿ ಮಾಡಿಕೊಂಡಿದ್ದಳು ಎಂದು ತಿಳಿದು ಬಂದಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…