Featured

ಫೋನ್ ಖರೀದಿಸಲು ಹಣ ನೀಡದ ತಾಯಿಯನ್ನೇ ಕತ್ತು ಹಿಸುಕಿ ಕೊಂದ ಮಗ – Vishwanews24

ಫೋನ್ ಖರೀದಿಸಲು ಹಣ ನೀಡದ ತಾಯಿಯನ್ನೇ ಕತ್ತು ಹಿಸುಕಿ ಕೊಂದ ಮಗ

ನಾಗ್ಪುರ: ಸ್ಮಾರ್ಟ್‌ಫೋನ್ ಖರೀದಿಸಲು ಹಣ ನೀಡಲಿಲ್ಲವೆಂದು ಮಗನೆ ತನ್ನ ಹೆತ್ತ ತಾಯಿಯನ್ನು ಕತ್ತು ಹಿಸುಕಿ ಕೊಲೆಗೈದ ಘಟನೆ ನಾಗ್ಪುರದಲ್ಲಿ ನಡೆದಿದೆ.

ಕಮಲಾಬಾಯಿ ಬದ್ವೈಕ್ (47) ಮೃತಪಟ್ಟ ಮಹಿಳೆ.

28 ವರ್ಷದ ರಮಾನಾಥ್ ಕೊಲೆ ಆರೋಪಿಯಾಗಿದ್ದು ಸದ್ಯ ಪೋಲೀಸರ ವಶದಲ್ಲಿದ್ದಾನೆ.

ಘಟನೆ ವಿವರ: ರಮಾನಾಥ್ ತಾನು ಸ್ಮಾರ್ಟ್ ಫೋನ್ ಖರೀಸಿಡಿಸಲು ತಾಯಿ ಬಳಿ ಹಣ ಕೇಳಿದ್ದಾನೆ ಇದಕ್ಕೆ ತಾಯಿ ಕಮಲಾಬಾಯಿ ಒಪ್ಪಲಿಲ್ಲ ಇದರಿಂದ ಕುಪಿತಗೊಂಡ ಮಗ ಚೂಡಿದಾರದ ಶಾಲ್ ನಿಂದ ತಾಯಿಯ ಕುತ್ತಿಗೆಗೆ ಬಿಗಿದಿದ್ದಾನೆ ಇದರಿಂದ ಪ್ರಜ್ಞೆ ತಪ್ಪಿ ಬಿದ್ದ ತಾಯಿಯನ್ನು ಕಂಡು ಗಾಬರಿಗೊಂಡ ರಮಾನಾಥ್ ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲದೆ ತಾಯಿಯನ್ನು ಆಸ್ಪತ್ರೆಗೆ ಸಾಗಿಸುವ ವಿಚಾರ ರಮಾನಾಥ್ ತನ್ನ ಸಹೋದರನ ಬಳಿ ಹೇಳಿದ್ದಾನೆ, ತಾಯಿಯ ಅರೋಗ್ಯ ಸರಿ ಇಲ್ಲ ಹಾಗಾಗಿ ಅವರನ್ನು ಆಸ್ಪತ್ರೆಗೆ ಕರೆತಂದಿರುವುದಾಗಿ ಸಹೋದರ ದೀಪಕ್ ಬಳಿ ಹೇಳಿದ್ದಾನೆ. ಸ್ವಲ್ಪ ಹೊತ್ತಿನ ಬಳಿಕ ತಾಯಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ಕರೆ ಮಾಡಿ ಹೇಳಿದ್ದಾನೆ ಇದರಿಂದ ಗಾಬರಿಗೊಂಡ ದೀಪಕ್ ಕೂಡಲೇ ಆಸ್ಪತ್ರೆಗೆ ದಾವಿಸಿದ್ದಾನೆ.

ಆಸ್ಪತ್ರೆಗೆ ತೆರಳಿ ತಾಯಿಯನ್ನು ಪರಿಶೀಲಿಸಿದಾಗ ತಾಯಿಯ ಕತ್ತಿನ ಬಳಿ ಗಾಯದ ಕಲೆಗಳು ಕಂಡುಬಂದಿತ್ತು ಅಲ್ಲದೆ ಕುತ್ತಿಗೆಯಲ್ಲಿದ್ದ ಚಿನ್ನದ ಸರಗಳು ಕಾಣೆಯಾಗಿತ್ತು ಇದರಿಂದ ಅನುಮಾನಗೊಂಡ ದೀಪಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ಮೃತ ಮಹಿಳೆಯ ಮಗ ರಮಾನಾಥ್ ನನ್ನೇ ತನಿಖೆಗೆ ಒಳಪಡಿಸಿದ್ದಾರೆ ಈ ವೇಳೆ ರಮಾನಾಥ್ ತಾನು ಮೊಬೈಲ್ ಖರೀದಿಸಲು ಅಮ್ಮನ ಬಳಿ ಹಣ ಕೇಳಿದ್ದೆ ಅದಕ್ಕೆ ಅಮ್ಮ ಒಪ್ಪಲಿಲ್ಲ ಕೋಪದಿಂದ ಶಾಲ್ ನಿಂದ ಕುತ್ತಿಗೆಗೆ ಬಿಗಿದು ಹತ್ಯೆಗೈದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಆರೋಪಿ ರಮಾನಾಥ್ ನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago