Featured

ಫೋರ್ಬ್ಸ್‌ನ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ ಸತತ 12 ನೇ ಬಾರಿಗೆ  ಅಗ್ರಸ್ಥಾನ ಉಳಿಸಿಕೊಂಡ ಮುಖೇಶ್ ಅಂಬಾನಿ -Vishwanews24

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು  ಫೋರ್ಬ್ಸ್‌ನ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ ಈ ವರ್ಷವೂ ಸತತ 12 ನೇ ಬಾರಿಗೆ  ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಈ ವರ್ಷ ಅವರ ಒಟ್ಟು ಆಸ್ತಿ ಮೌಲ್ಯ 51.4 ಶತಕೋಟಿ ಡಾಲರ್‌ಗೆ ಏರಿದೆ.

‘ಅಂಬಾನಿ ಅವರು ತಮ್ಮ ಆಸ್ತಿಗೆ 4.1 ಬಿಲಿಯನ್ ಡಾಲರ್‌ ಹೆಚ್ಚುವರಿ ಸೇರಿಸಿದ್ದಾರೆ. ತಮ್ಮ ರಿಲಯನ್ಸ್  ಇಂಡಸ್ಟ್ರೀಸ್‌ನ ಮೂರು ವರ್ಷದ ಹಳೆಯ ಟೆಲಿಕಾಂ ಘಟಕವಾದ ಜಿಯೋ, 340 ದಶಲಕ್ಷ ಚಂದಾದಾರರನ್ನು  ಹೊಂದಿರುವ ಭಾರತದ ಅತಿದೊಡ್ಡ ಮೊಬೈಲ್ ಸೇವಾ ಕಂಪೆನಿಗಳಲ್ಲಿ ಒಂದಾಗಿದೆ.’ ಎಂದು ಫೋರ್ಬ್ಸ್  ಹೇಳಿದೆ.

ಈ  ಪಟ್ಟಿಯಲ್ಲಿ ಅಂಬಾನಿ  ಮತ್ತು ಅದಾನಿ ನಂತರ ಅಶೋಕ್ ಲೇಲ್ಯಾಂಡ್ ಮಾಲೀಕರಾದ  ಹಿಂದೂಜಾ ಸಹೋದರರು,  ಶಪೂರ್ಜಿ ಪಲ್ಲೊಂಜಿ ಗ್ರೂಪ್‌ನ ಪಲ್ಲೊಂಜಿ ಮಿಸ್ತ್ರಿ, ಕೊಟಕ್ ಮಹೀಂದ್ರಾ ಬ್ಯಾಂಕಿನ  ಉದಯ್ ಕೊಟಕ್ ಹಾಗೂ ಎಚ್‌ಸಿಎಲ್ ಟೆಕ್ನಾಲಜೀಸ್‌ನ ಶಿವ ನಾಡರ್ ನಂತರದ  ಸ್ಥಾನಗಳಲ್ಲಿದ್ದಾರೆ.  4 ಶತಕೋಟಿ ಡಾಲರ್‌ ಮೊತ್ತದ ಆಸ್ತಿ ಏರಿಕೆಯಿಂದ ಉದಯ್ ಕೊಟಕ್  ಮೊದಲ ಬಾರಿಗೆ ಮೊದಲ ಐದು ಸ್ಥಾನಕ್ಕೆ ಏರಿದ್ದಾರೆ.

ಮೂಲಸೌಕರ್ಯ ವಲಯದ ಉದ್ಯಮಿ ಗೌತಮ್ ಅದಾನಿ ಅವರ ಸಂಪತ್ತಿನಲ್ಲೂ ಗಣನೀಯ ಹೆಚ್ಚಳವಾಗಿದೆ. 15.7  ಶತಕೋಟಿ ಡಾಲರ್ ಮೌಲ್ಯದ ಆಸ್ತಿ ಏರಿಕೆಯೊಂದಿಗೆ ಹಿಂದಿನ ವರ್ಷ ಎಂಟನೇ ಸ್ಥಾನದಲ್ಲಿದ್ದ ಅದಾನಿ, ಪಟ್ಟಿಯಲ್ಲಿ  ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago