Featured

ಫೋರ್ಬ್ಸ್‌ನ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ ಸತತ 12 ನೇ ಬಾರಿಗೆ  ಅಗ್ರಸ್ಥಾನ ಉಳಿಸಿಕೊಂಡ ಮುಖೇಶ್ ಅಂಬಾನಿ -Vishwanews24

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು  ಫೋರ್ಬ್ಸ್‌ನ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ ಈ ವರ್ಷವೂ ಸತತ 12 ನೇ ಬಾರಿಗೆ  ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಈ ವರ್ಷ ಅವರ ಒಟ್ಟು ಆಸ್ತಿ ಮೌಲ್ಯ 51.4 ಶತಕೋಟಿ ಡಾಲರ್‌ಗೆ ಏರಿದೆ.

‘ಅಂಬಾನಿ ಅವರು ತಮ್ಮ ಆಸ್ತಿಗೆ 4.1 ಬಿಲಿಯನ್ ಡಾಲರ್‌ ಹೆಚ್ಚುವರಿ ಸೇರಿಸಿದ್ದಾರೆ. ತಮ್ಮ ರಿಲಯನ್ಸ್  ಇಂಡಸ್ಟ್ರೀಸ್‌ನ ಮೂರು ವರ್ಷದ ಹಳೆಯ ಟೆಲಿಕಾಂ ಘಟಕವಾದ ಜಿಯೋ, 340 ದಶಲಕ್ಷ ಚಂದಾದಾರರನ್ನು  ಹೊಂದಿರುವ ಭಾರತದ ಅತಿದೊಡ್ಡ ಮೊಬೈಲ್ ಸೇವಾ ಕಂಪೆನಿಗಳಲ್ಲಿ ಒಂದಾಗಿದೆ.’ ಎಂದು ಫೋರ್ಬ್ಸ್  ಹೇಳಿದೆ.

ಈ  ಪಟ್ಟಿಯಲ್ಲಿ ಅಂಬಾನಿ  ಮತ್ತು ಅದಾನಿ ನಂತರ ಅಶೋಕ್ ಲೇಲ್ಯಾಂಡ್ ಮಾಲೀಕರಾದ  ಹಿಂದೂಜಾ ಸಹೋದರರು,  ಶಪೂರ್ಜಿ ಪಲ್ಲೊಂಜಿ ಗ್ರೂಪ್‌ನ ಪಲ್ಲೊಂಜಿ ಮಿಸ್ತ್ರಿ, ಕೊಟಕ್ ಮಹೀಂದ್ರಾ ಬ್ಯಾಂಕಿನ  ಉದಯ್ ಕೊಟಕ್ ಹಾಗೂ ಎಚ್‌ಸಿಎಲ್ ಟೆಕ್ನಾಲಜೀಸ್‌ನ ಶಿವ ನಾಡರ್ ನಂತರದ  ಸ್ಥಾನಗಳಲ್ಲಿದ್ದಾರೆ.  4 ಶತಕೋಟಿ ಡಾಲರ್‌ ಮೊತ್ತದ ಆಸ್ತಿ ಏರಿಕೆಯಿಂದ ಉದಯ್ ಕೊಟಕ್  ಮೊದಲ ಬಾರಿಗೆ ಮೊದಲ ಐದು ಸ್ಥಾನಕ್ಕೆ ಏರಿದ್ದಾರೆ.

ಮೂಲಸೌಕರ್ಯ ವಲಯದ ಉದ್ಯಮಿ ಗೌತಮ್ ಅದಾನಿ ಅವರ ಸಂಪತ್ತಿನಲ್ಲೂ ಗಣನೀಯ ಹೆಚ್ಚಳವಾಗಿದೆ. 15.7  ಶತಕೋಟಿ ಡಾಲರ್ ಮೌಲ್ಯದ ಆಸ್ತಿ ಏರಿಕೆಯೊಂದಿಗೆ ಹಿಂದಿನ ವರ್ಷ ಎಂಟನೇ ಸ್ಥಾನದಲ್ಲಿದ್ದ ಅದಾನಿ, ಪಟ್ಟಿಯಲ್ಲಿ  ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

30 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

43 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago