Featured

ಫ್ರಾನ್ಸ್‌ನಿಂದ ಮತ್ತೆ ಭಾರತಕ್ಕೆ  ಆಗಮಿಸಿದ 3 ರಫೇಲ್ ಯುದ್ಧ ವಿಮಾನಗಳು : ಸೇನೆಗೆ ಮತ್ತಷ್ಟು ಬಲ -Vishwanews24

ಫ್ರಾನ್ಸ್‌ನಿಂದ ಮತ್ತೆ ಭಾರತಕ್ಕೆ  ಆಗಮಿಸಿದ 3 ರಫೇಲ್ ಯುದ್ಧ ವಿಮಾನಗಳು : ಸೇನೆಗೆ ಮತ್ತಷ್ಟು ಬಲ -Vishwanews24

ನವದೆಹಲಿ,: ಫ್ರಾನ್ಸ್‌ನ ಡಾಸೊ ಏವಿಯೇಶನ್‌ ಕಂಪನಿ ನಿರ್ಮಿಸಿರುವ ಮೂರು ರಫೇಲ್‌ ಯುದ್ಧ ವಿಮಾನಗಳು ಬುಧವಾರದಂದು ಭಾರತಕ್ಕೆ ಆಗಮಿಸಿದ್ದು, ಗುಜರಾತ್‌ನ ಜಾಮ್‌ನಗರ್ ವಾಯುನೆಲೆಗೆ ಬಂದಿಳಿದಿವೆ.

ಫ್ರಾನ್ಸ್‌ನಿಂದ 7 ಸಾವಿರ ಕಿ.ಮೀ ಕ್ರಮಿಸಿ 3ನೇ ಹಂತದಲ್ಲಿ ಭಾರತಕ್ಕೆ ತಲುಪಿರುವ ಯುದ್ಧ ವಿಮಾನಗಳು ವಾಯುಪಡೆಯ ಬಲವನ್ನು ಮತ್ತಷ್ಟು ಹೆಚ್ಚಿಸಿವೆ.

ಈ ಕುರಿತು ಟ್ವೀಟ್‌ ಮಾಡಿರುವ ಭಾರತೀಯ ವಾಯುಸೇನೆಯು, “ಮೂರನೇ ಹಂತದಲ್ಲಿ ಮೂರು ರಫೇಲ್‌ ಯುದ್ಧವಿಮಾನಗಳು ಐಎಎಫ್‌ ವಾಯುನೆಲೆಗೆ ಬಂದಿಳಿದಿದ್ದು, ಅವುಗಳು ತಡೆರಹಿತವಾಗಿ 7000 ಕಿ.ಮೀ ದೂರ ಕ್ರಮಿಸಿ ಇಲ್ಲಿಗೆ ತಲುಪಿವೆ. ಯುಎಇಯಲ್ಲಿರುವ ಫ್ರಾನ್ಸ್‌ನ ವಾಯುನೆಲೆಯಲ್ಲಿ ಇಂಧನ ತುಂಬಿಸಿಕೊಳ್ಳುವುದಕ್ಕಾಗಿ ಒಂದು ಬಾರಿ ನಿಲುಗಡೆ ಮಾಡಲಾಗಿದೆ. ಯುಎಇ ವಾಯುಪಡೆಯು ಒದಗಿಸಿದ ಟ್ಯಾಂಕರ್(ಇಂಧನ) ಬೆಂಬಲವನ್ನು ಭಾರತೀಯ ವಾಯುಪಡೆ ಪ್ರಶಂಸಿಸುತ್ತದೆ” ಎಂದು ಹೇಳಿದೆ.

ಇನ್ನು ಫ್ರಾನ್ಸ್‌ನ ಡಾಸೊ ಏವಿಯೇಶನ್‌ ಕಂಪನಿ ನಿರ್ಮಿಸಿರುವ ರಫೇಲ್‌ ಯುದ್ಧವಿಮಾನಗಳನ್ನು ಕಳೆದ ವರ್ಷ ಸೆಪ್ಟಂಬರ್ 10ರಂದು ವಾಯುಪಡೆಗೆ ಸೇರ್ಪಡೆಗೊಳಿಸಲಾಗಿದ್ದು, ಎರಡನೇ ಹಂತದ ರಫೇಲ್‌ ಯುದ್ಧ ವಿಮಾನಗಳು ನವೆಂಬರ್‌ನಲ್ಲಿ ಭಾರತಕ್ಕೆ ಬಂದಿದ್ದು, ಇದೀಗ ಮತ್ತೆ ಮೂರು ರಫೇಲ್‌ ಯುದ್ಧ ವಿಮಾನಗಳು ಬಂದಿಳಿದಿವೆ.

ಕುಂದಾಪುರ : ಯುವ ಪತ್ರಕರ್ತ ಯೋಗೀಶ್ ಕುಂಭಾಶಿಯವರಿಗೆ ರಾಜ್ಯ ಮಟ್ಟದ ಭೀಮ ರತ್ನ ಪ್ರಶಸ್ತಿ -Vishwanews24

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

10 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

11 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

11 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

11 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

11 hours ago