Featured

ಫ್ರಾನ್ಸ್‌ನಿಂದ ಮತ್ತೆ ಭಾರತಕ್ಕೆ  ಆಗಮಿಸಿದ 3 ರಫೇಲ್ ಯುದ್ಧ ವಿಮಾನಗಳು : ಸೇನೆಗೆ ಮತ್ತಷ್ಟು ಬಲ -Vishwanews24

ಫ್ರಾನ್ಸ್‌ನಿಂದ ಮತ್ತೆ ಭಾರತಕ್ಕೆ  ಆಗಮಿಸಿದ 3 ರಫೇಲ್ ಯುದ್ಧ ವಿಮಾನಗಳು : ಸೇನೆಗೆ ಮತ್ತಷ್ಟು ಬಲ -Vishwanews24

ನವದೆಹಲಿ,: ಫ್ರಾನ್ಸ್‌ನ ಡಾಸೊ ಏವಿಯೇಶನ್‌ ಕಂಪನಿ ನಿರ್ಮಿಸಿರುವ ಮೂರು ರಫೇಲ್‌ ಯುದ್ಧ ವಿಮಾನಗಳು ಬುಧವಾರದಂದು ಭಾರತಕ್ಕೆ ಆಗಮಿಸಿದ್ದು, ಗುಜರಾತ್‌ನ ಜಾಮ್‌ನಗರ್ ವಾಯುನೆಲೆಗೆ ಬಂದಿಳಿದಿವೆ.

ಫ್ರಾನ್ಸ್‌ನಿಂದ 7 ಸಾವಿರ ಕಿ.ಮೀ ಕ್ರಮಿಸಿ 3ನೇ ಹಂತದಲ್ಲಿ ಭಾರತಕ್ಕೆ ತಲುಪಿರುವ ಯುದ್ಧ ವಿಮಾನಗಳು ವಾಯುಪಡೆಯ ಬಲವನ್ನು ಮತ್ತಷ್ಟು ಹೆಚ್ಚಿಸಿವೆ.

ಈ ಕುರಿತು ಟ್ವೀಟ್‌ ಮಾಡಿರುವ ಭಾರತೀಯ ವಾಯುಸೇನೆಯು, “ಮೂರನೇ ಹಂತದಲ್ಲಿ ಮೂರು ರಫೇಲ್‌ ಯುದ್ಧವಿಮಾನಗಳು ಐಎಎಫ್‌ ವಾಯುನೆಲೆಗೆ ಬಂದಿಳಿದಿದ್ದು, ಅವುಗಳು ತಡೆರಹಿತವಾಗಿ 7000 ಕಿ.ಮೀ ದೂರ ಕ್ರಮಿಸಿ ಇಲ್ಲಿಗೆ ತಲುಪಿವೆ. ಯುಎಇಯಲ್ಲಿರುವ ಫ್ರಾನ್ಸ್‌ನ ವಾಯುನೆಲೆಯಲ್ಲಿ ಇಂಧನ ತುಂಬಿಸಿಕೊಳ್ಳುವುದಕ್ಕಾಗಿ ಒಂದು ಬಾರಿ ನಿಲುಗಡೆ ಮಾಡಲಾಗಿದೆ. ಯುಎಇ ವಾಯುಪಡೆಯು ಒದಗಿಸಿದ ಟ್ಯಾಂಕರ್(ಇಂಧನ) ಬೆಂಬಲವನ್ನು ಭಾರತೀಯ ವಾಯುಪಡೆ ಪ್ರಶಂಸಿಸುತ್ತದೆ” ಎಂದು ಹೇಳಿದೆ.

ಇನ್ನು ಫ್ರಾನ್ಸ್‌ನ ಡಾಸೊ ಏವಿಯೇಶನ್‌ ಕಂಪನಿ ನಿರ್ಮಿಸಿರುವ ರಫೇಲ್‌ ಯುದ್ಧವಿಮಾನಗಳನ್ನು ಕಳೆದ ವರ್ಷ ಸೆಪ್ಟಂಬರ್ 10ರಂದು ವಾಯುಪಡೆಗೆ ಸೇರ್ಪಡೆಗೊಳಿಸಲಾಗಿದ್ದು, ಎರಡನೇ ಹಂತದ ರಫೇಲ್‌ ಯುದ್ಧ ವಿಮಾನಗಳು ನವೆಂಬರ್‌ನಲ್ಲಿ ಭಾರತಕ್ಕೆ ಬಂದಿದ್ದು, ಇದೀಗ ಮತ್ತೆ ಮೂರು ರಫೇಲ್‌ ಯುದ್ಧ ವಿಮಾನಗಳು ಬಂದಿಳಿದಿವೆ.

ಕುಂದಾಪುರ : ಯುವ ಪತ್ರಕರ್ತ ಯೋಗೀಶ್ ಕುಂಭಾಶಿಯವರಿಗೆ ರಾಜ್ಯ ಮಟ್ಟದ ಭೀಮ ರತ್ನ ಪ್ರಶಸ್ತಿ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

9 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

9 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago