ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಎಲ್ಲರೂ ಅರ್ಜಿ ಹಾಕಲೇಬೇಕು. ಜೊತೆಗೆ ಕರಾರು ಪತ್ರವೂ ಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಂತ ಮನೆಯಿರಲಿ, ಬಾಡಿಗೆ ಮನೆ ಇರಲಿ ಉಚಿತ ವಿದ್ಯುತ್ ಪಡೆಯಲು ಕರಾರು ಪತ್ರ ಬೇಕು.
ರಾಜ್ಯದಲ್ಲಿ 2.16 ಕೋಟಿ 200 ಯೂನಿಟ್ ಗಿಂತ ಕಡಿಮೆ ಬಳಕೆದಾರರಿದ್ದಾರೆ. 2.14 ಕೋಟಿ ಜನರಿಗೆ ಇದರ ಲಾಭ ಸಿಗಲಿದೆ. 200 ಯೂನಿಟ್ ವಿದ್ಯುತ್ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ. 12 ತಿಂಗಳ ಸರಾಸರಿ ಆಧಾರದ ಮೇಲೆ 10% ಹೆಚ್ಚು ವಿದ್ಯುತ್ ಬಳಕೆ ಉಚಿತವಾಗಿರುತ್ತದೆ ಎಂದರು.
ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಗ್ರಾಹಕರು ಅರ್ಜಿ ಹಾಕಬೇಕು. ಸೇವಾಸಿಂಧು ಆಯಪ್ ನಲ್ಲಿ ಜನರು ಅರ್ಜಿ ಸಲ್ಲಿಸಬೇಕು. ಜುಲೈ ತಿಂಗಳ ಬಿಲ್ ಆಗಸ್ಟ್ ನಲ್ಲಿ ಪಾವತಿ ಮಾಡುವುದು ಬೇಡ ಎಂದು ಹೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…