ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಈಚೆಗೆ ಪ್ರತಿಭಟನೆ ಸಮಯದಲ್ಲಿ ‘ಫ್ರೀ ಕಾಶ್ಮೀರ’ ಫಲಕ ಹಿಡಿದ ಯುವತಿ ಬಿ.ನಳಿನಿ ಪರವಾಗಿ ವಕೀಲರು ವಕಾಲತ್ತು ವಹಿಸಬಾರದು ಎಂದು ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸಭೆ ಮಂಗಳವಾರ ನಿರ್ಣಯ ಕೈಗೊಂಡಿದೆ.
ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶಿಸಿದ ಯುವತಿ ಪರವಾಗಿ ಮೈಸೂರಿನ ಯಾವ ವಕೀಲರೂ ವಕಾಲತು ವಹಿಸಬಾರದು. ಈ ಹಿಂದೆ ಕೂಡ ಇಂತಹ ಪ್ರಕರಣಗಳಲ್ಲಿ ಆರೋಪಿ ಪರ ಯಾರೂ ವಕಾಲತ್ತು ವಹಿಸಿಲ್ಲ. ಶಂಕಿತ ಉಗ್ರರಾದ ಫಹಾದ್ ಮತ್ತು ಅಲಿ ಪ್ರಕರಣದಲ್ಲೂ ವಕಾಲತ್ತು ವಹಿಸಿಲ್ಲ. ಈ ಬಾರಿಯೂ ಇದೇ ದಿಟ್ಟ ನಿರ್ಣಯ ಕೈಗೊಳ್ಳಿ. ಈ ಮೂಲಕ ಸಂಘದ ಗೌರವ ಕಾಪಾಡಿ ಎಂದು ಯುವ ವಕೀಲರು ಮೈಸೂರಿನ ವಕೀಲರ ಸಂಘದ ಅಧ್ಯಕ್ಷ ಆನಂದ ಕುಮಾರ್ಗೆ ಮನವಿ ಮಾಡಿದ್ದರು.
ಇದಕ್ಕೂ ಮುನ್ನ ಕೆಲವು ವಕೀಲರು ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಳ್ಳಬೇಕು ಎಂದು ಸಂಘಕ್ಕೆ ಮನವಿ ಪತ್ರ ಕೊಟ್ಟಿದ್ದರು. ಈ ಹಿಂದೆ ವಕಾಲತ್ತು ವಹಿಸಿದ್ದ ವಕೀಲ ಪೃಥ್ವಿ ಸಹ ವೈಯಕ್ತಿಕ ಕಾರಣಗಳನ್ನು ನೀಡಿ ಪ್ರಕರಣದಿಂದ ಹಿಂದೆ ಸರಿದಿದ್ದರು.
ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವುದಕ್ಕೆ ಪೊಲೀಸರು ಮಂಗಳವಾರ ಆಕ್ಷೇಪಣೆ ಸಲ್ಲಿಸಬೇಕಿದೆ. ಪ್ರಕರಣ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…