ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಈಚೆಗೆ ಪ್ರತಿಭಟನೆ ಸಮಯದಲ್ಲಿ ‘ಫ್ರೀ ಕಾಶ್ಮೀರ’ ಫಲಕ ಹಿಡಿದ ಯುವತಿ ಬಿ.ನಳಿನಿ ಪರವಾಗಿ ವಕೀಲರು ವಕಾಲತ್ತು ವಹಿಸಬಾರದು ಎಂದು ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸಭೆ ಮಂಗಳವಾರ ನಿರ್ಣಯ ಕೈಗೊಂಡಿದೆ.
ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶಿಸಿದ ಯುವತಿ ಪರವಾಗಿ ಮೈಸೂರಿನ ಯಾವ ವಕೀಲರೂ ವಕಾಲತು ವಹಿಸಬಾರದು. ಈ ಹಿಂದೆ ಕೂಡ ಇಂತಹ ಪ್ರಕರಣಗಳಲ್ಲಿ ಆರೋಪಿ ಪರ ಯಾರೂ ವಕಾಲತ್ತು ವಹಿಸಿಲ್ಲ. ಶಂಕಿತ ಉಗ್ರರಾದ ಫಹಾದ್ ಮತ್ತು ಅಲಿ ಪ್ರಕರಣದಲ್ಲೂ ವಕಾಲತ್ತು ವಹಿಸಿಲ್ಲ. ಈ ಬಾರಿಯೂ ಇದೇ ದಿಟ್ಟ ನಿರ್ಣಯ ಕೈಗೊಳ್ಳಿ. ಈ ಮೂಲಕ ಸಂಘದ ಗೌರವ ಕಾಪಾಡಿ ಎಂದು ಯುವ ವಕೀಲರು ಮೈಸೂರಿನ ವಕೀಲರ ಸಂಘದ ಅಧ್ಯಕ್ಷ ಆನಂದ ಕುಮಾರ್ಗೆ ಮನವಿ ಮಾಡಿದ್ದರು.
ಇದಕ್ಕೂ ಮುನ್ನ ಕೆಲವು ವಕೀಲರು ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಳ್ಳಬೇಕು ಎಂದು ಸಂಘಕ್ಕೆ ಮನವಿ ಪತ್ರ ಕೊಟ್ಟಿದ್ದರು. ಈ ಹಿಂದೆ ವಕಾಲತ್ತು ವಹಿಸಿದ್ದ ವಕೀಲ ಪೃಥ್ವಿ ಸಹ ವೈಯಕ್ತಿಕ ಕಾರಣಗಳನ್ನು ನೀಡಿ ಪ್ರಕರಣದಿಂದ ಹಿಂದೆ ಸರಿದಿದ್ದರು.
ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವುದಕ್ಕೆ ಪೊಲೀಸರು ಮಂಗಳವಾರ ಆಕ್ಷೇಪಣೆ ಸಲ್ಲಿಸಬೇಕಿದೆ. ಪ್ರಕರಣ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…