ಶಿರ್ವ: ಬಂಟಕಲ್ಲು- ಬಿ.ಸಿ.ರೋಡ್ ಮುಖ್ಯರಸ್ತೆಯ ಪಾಸ್ಕಲ್ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಮಂಗಳವಾರ ಮುಂಜಾನೆ ಕಾರೊಂದು ಹೈಟೆನ್ಶನ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂಬ ಮುರಿದು ಹಾನಿ ಸಂಭವಿಸಿದೆ.
ಕಟಪಾಡಿ ಕಡೆಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಕ್ವಾಲೀಸ್ ಕಾರು ಎಡ ಭಾಗದಿಂದ ಬಲ ಭಾಗಕ್ಕೆ ಚಲಿಸಿ ಹೈಟೆನ್ಶನ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ನಿಂತಿದೆ.
ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬದ ಬುಡ ಮತ್ತು ನಡುವೆ ಮುರಿದಿದ್ದು ಸುಮಾರು ಒಂದು ಮೀಟರ್ ಮುಂದಕ್ಕೆ ಹೋಗಿ ವಯರ್ನ ಆಧಾರದಲ್ಲಿ ವಾಲಿ ನಿಂತಿದೆ.
ಕಂಬದಲ್ಲಿದ್ದ ಗ್ರಾ.ಪಂ.ನ ವಿದ್ಯುತ್ ಮೀಟರ್ ಸಂಪೂರ್ಣ ಹಾನಿಗೊಂಡಿದ್ದು ವಿದ್ಯುತ್ ವ್ಯತ್ಯಯ ಉಂಟಾಗಿದೆ. ಮೆಸ್ಕಾಂ ಸಿಬಂದಿ ಮಂಜು ತತ್ಕ್ಷಣ ಧಾವಿಸಿ ವಿದ್ಯುತ್ ಕಡಿತಗೊಳಿಸಿದ್ದಾರೆ.
ಕಾರಿಗೂ ಹಾನಿ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುತ್ಯಾರು ಮೂಲದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಉದ್ಯಾವರದಲ್ಲಿ ನೇಮವೊಂದಕ್ಕೆ ತೆರಳಿ ವಾಪಾಸಾಗುತ್ತಿದ್ದ ಕಾರು ಚಾಲಕನ ನಿದ್ದೆಯ ಮಂಪರಿನಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…