ಕಾಪು: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಇಂಡಿಯನ್ ಸೊಸೈಟಿ ಫಾರ್ ಟ್ರೈನಿಂಗ್ ಆ್ಯಂಡ್ ಡೆವಲಪ್ಮೆಂಟ್(ಐಎಸ್ಟಿಡಿ) ಮಂಗಳೂರು ಉಡುಪಿ ಘಟಕದ 04 ಜೂನ್ 2020ರಂದು ಒಡಂಬಡಿಕೆ ಮಾಡಿಕೊಂಡಿದೆ. ಈ ಒಪ್ಪಂದದ ಪ್ರಕಾರ ಕಾಲೇಜಿನ ಸಿಬ್ಬಂದಿಗಳು ಹಾಗೂ ಐಎಸ್ಟಿಡಿಯ ಸದಸ್ಯರು ವಿದ್ಯಾರ್ಥಿಗಳಿಗಾಗಿ ಹಲವಾರು ಸುಧಾರಣಾ ಕಾರ್ಯಕ್ರಮಗಳು, ಹೆಚ್ಆರ್ಡಿ, ಸಿಎಸ್ರ್ ಮತ್ತು ಒಡಿ ತರಬೇತಿ ಕಾರ್ಯಕ್ರಮಗಳನ್ನು ಒಟ್ಟಾಗಿ ನಡೆಸಿಕೊಡಲಾಗುವುದು ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಐಎಸ್ಟಿಡಿ ಘಟಕಕ್ಕೆ ಬೇಕಾದ ಅಗತ್ಯ ಬೆಂಬಲವನ್ನು ಕಾಲೇಜು ನೀಡಲು ಒಪ್ಪಿಕೊಂಡಿದ್ದು, ಇಂತಹ ತರಬೇತಿ ಕಾರ್ಯಕ್ರಮಗಳನ್ನು ನಡೆಸಿಕೊಡಲು ಸರ್ಕಾರಿ ಸಂಸ್ಥೆಗಳು, ಕೈಗಾರಿಕೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಐಎಸ್ಟಿಡಿ ಒಟ್ಟುಗೂಡಿಸುತ್ತದೆ. ಅಂತಹ ಸಂಸ್ಥೆಗಳು, ವಿದ್ಯಾಲಯದ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳಿಗೆ ನೀಡುವ ತರಬೇತಿ ಕಾರ್ಯಕ್ರವiಗಳಲ್ಲಿ ತರಬೇತುದಾರರಾಗಿ ಹಾಗೂ ಸಂಘಟಕರಾಗಿ ಕಾರ್ಯನಿರ್ವಹಿಸುತ್ತದೆ.
ಒಡಂಬಡಿಕಾ ಪತ್ರಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ| ತಿರುಮಲೇಶ್ವರ ಭಟ್ ಮತ್ತು ಐಎಸ್ಟಿಡಿ ಮಂಗಳೂರು ಉಡುಪಿ ಘಟಕದ ಅಧ್ಯಕ್ಷರಾದ ಪ್ರೊ. ರಾಮಕೃಷ್ಣ ಚಡಗ ಅವರು ದಿನಾಂಕ 04 ಜೂನ್ 2020 ರಂದು ಸಹಿ ಹಾಕಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್, ಇತರ ವಿಭಾಗಗಳ ಮುಖ್ಯಸ್ಥರು ಹಾಗೂ ಕಾಲೇಜಿನ ಐಎಸ್ಟಿಡಿ ಘಟಕದ ಸದಸ್ಯರು ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…