ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿ0ಗ್ ವಿಭಾಗದ ವಿದ್ಯಾರ್ಥಿಗಳಾದ ಐಶ್ವರ್ಯ, ಕಿರಣ್, ಗುರುಕಿರಣ್, ಲಿಖಿತ್ ಎರ್ಮಾಳ್ ಇವರು ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ರಾಜಾ ಯತೀಶ್ ಯಾದವ್ ಇವರ ನೇತೃತ್ವದಲ್ಲಿ ಸೌರಶಕ್ತಿ ಚಾಲಿತ ಬೀಜ ಬಿತ್ತನೆ ಯಂತ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ.
ರೈತರು ಕೃಷಿ ಭೂಮಿಯಲ್ಲಿ ಬೀಜಗಳನ್ನು ಬಿತ್ತಲು ಸಾಂಪ್ರದಾಯಿಕ ವಿಧಾನಗಳನ್ನು ಬಳಸುತ್ತಿದ್ದಾರೆ. ಈ ಹಳೆಯ ವ್ಯವಸ್ಥೆಯಲ್ಲಿ ಕೈಯಿಂದ ಬೀಜ ಬಿತ್ತಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಹಾಗೂ ಕಾರ್ಮಿಕರ ಕೊರತೆಯಿರುವುದರಿಂದ ಈ ಪದ್ಧತಿಯು ಕ್ರಮೇಣ ಅಪ್ರಸ್ತುತ ಎನಿಸುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ವಿದ್ಯಾರ್ಥಿಗಳು ಸ್ವಯಂಚಾಲಿತ ಬಿತ್ತನ ಬೀಜವನ್ನು ಅಭಿವೃದ್ದಿ ಪಡಿಸಿದ್ದಾರೆ.
ಈ ಯಂತ್ರವು ಸೌರಶಕ್ತಿ ಚಾಲಿತ ಬ್ಯಾಟರಿಯನ್ನು ಉಪಯೋಗಿಸುವುದರಿಂದ ಪರಿಸರ ಸ್ನೇಹಿಯಾಗಿದೆ. ಈ ಯಂತ್ರದಲ್ಲಿ ಬೀಜವನ್ನು ಮಣ್ಣಿನಲ್ಲಿ ಹಾಕುವ ಮೊದಲು ಸುಮಾರು ೪ ಸೆಂ. ಮೀ ಆಳಕ್ಕೆ ಮಣ್ಣನ್ನು ಅಗೆಯಲು ಅವಕಾಶವಿದೆ. ಬಿತ್ತನೆಯೊಂದಿಗೆ ನೀರು ಮತ್ತು ದ್ರವ ಗೊಬ್ಬರಗಳನ್ನು ಸಿಂಪಡಿಸುವುದು ಈ ಯಂತ್ರದ ಹೆಚ್ಚುವರಿ ವೈಶಿಷ್ಟö್ಯವಾಗಿದೆ. ಈ ಯಂತ್ರವು ನೆಲಗಡಲೆ ಬೆಳೆಯುವ ರೈತರಿಗೆ ಹೆಚ್ಚು ಸೂಕ್ತವಾಗಿದೆ.
ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಮತ್ತು ಉಪ ಪ್ರಾಶುಪಾಲರಾದ ಡಾ. ಗಣೇಶ್ ಐತಾಳ್ ಅಭಿನಂದಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…