ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿ0ಗ್ ವಿಭಾಗದ ವಿದ್ಯಾರ್ಥಿಗಳಾದ ಐಶ್ವರ್ಯ, ಕಿರಣ್, ಗುರುಕಿರಣ್, ಲಿಖಿತ್ ಎರ್ಮಾಳ್ ಇವರು ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ರಾಜಾ ಯತೀಶ್ ಯಾದವ್ ಇವರ ನೇತೃತ್ವದಲ್ಲಿ ಸೌರಶಕ್ತಿ ಚಾಲಿತ ಬೀಜ ಬಿತ್ತನೆ ಯಂತ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ.
ರೈತರು ಕೃಷಿ ಭೂಮಿಯಲ್ಲಿ ಬೀಜಗಳನ್ನು ಬಿತ್ತಲು ಸಾಂಪ್ರದಾಯಿಕ ವಿಧಾನಗಳನ್ನು ಬಳಸುತ್ತಿದ್ದಾರೆ. ಈ ಹಳೆಯ ವ್ಯವಸ್ಥೆಯಲ್ಲಿ ಕೈಯಿಂದ ಬೀಜ ಬಿತ್ತಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಹಾಗೂ ಕಾರ್ಮಿಕರ ಕೊರತೆಯಿರುವುದರಿಂದ ಈ ಪದ್ಧತಿಯು ಕ್ರಮೇಣ ಅಪ್ರಸ್ತುತ ಎನಿಸುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ವಿದ್ಯಾರ್ಥಿಗಳು ಸ್ವಯಂಚಾಲಿತ ಬಿತ್ತನ ಬೀಜವನ್ನು ಅಭಿವೃದ್ದಿ ಪಡಿಸಿದ್ದಾರೆ.
ಈ ಯಂತ್ರವು ಸೌರಶಕ್ತಿ ಚಾಲಿತ ಬ್ಯಾಟರಿಯನ್ನು ಉಪಯೋಗಿಸುವುದರಿಂದ ಪರಿಸರ ಸ್ನೇಹಿಯಾಗಿದೆ. ಈ ಯಂತ್ರದಲ್ಲಿ ಬೀಜವನ್ನು ಮಣ್ಣಿನಲ್ಲಿ ಹಾಕುವ ಮೊದಲು ಸುಮಾರು ೪ ಸೆಂ. ಮೀ ಆಳಕ್ಕೆ ಮಣ್ಣನ್ನು ಅಗೆಯಲು ಅವಕಾಶವಿದೆ. ಬಿತ್ತನೆಯೊಂದಿಗೆ ನೀರು ಮತ್ತು ದ್ರವ ಗೊಬ್ಬರಗಳನ್ನು ಸಿಂಪಡಿಸುವುದು ಈ ಯಂತ್ರದ ಹೆಚ್ಚುವರಿ ವೈಶಿಷ್ಟö್ಯವಾಗಿದೆ. ಈ ಯಂತ್ರವು ನೆಲಗಡಲೆ ಬೆಳೆಯುವ ರೈತರಿಗೆ ಹೆಚ್ಚು ಸೂಕ್ತವಾಗಿದೆ.
ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಮತ್ತು ಉಪ ಪ್ರಾಶುಪಾಲರಾದ ಡಾ. ಗಣೇಶ್ ಐತಾಳ್ ಅಭಿನಂದಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…