Featured

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಸೃಷ್ಟಿ” ಅತ್ಯುತ್ತಮ ಯೋಜನ ಪ್ರಶಸ್ತಿ – Vishwanews24

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಸೃಷ್ಟಿ” ಅತ್ಯುತ್ತಮ ಯೋಜನ ಪ್ರಶಸ್ತಿ

ಬಂಟಕಲ್ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಎರಡನೇ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿದ್ಯಾರ್ಥಿಗಳಾದ ಮಹಮ್ಮದ್ ಅತೀಕ್, ಕೆ ಎನ್ ಶ್ರೀಶ, ರೋಹನ ಯು ಪಾಲನ್ ಇವರು ಮೆಕ್ಯಾನಿಕಲ್ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಕಾರ್ತಿಕ್ ವಿ ಇವರ ನೇತೃತ್ವದಲ್ಲಿ ಅಡಿಕೆ
ಮರವನ್ನು ಏರುವ ಮತ್ತು ಮಳೆಗಾಲದ ಸಮಯದಲ್ಲಿ ಶಿಲೀಂಧ್ರದಿ0ದ ಅಡಿಕೆ ಬೆಳೆಯನ್ನು ರಕ್ಷಿಸಲು ಕೀಟನಾಶಕವನ್ನು ಸಿಂಪಡಿಸುವ ಯಂತ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ.

ವಿ ಎಸ್ ಎಸ್ ಟ್ರಸ್ಟ್ ಮತ್ತು ವಿಶ್ವೇಶ್ವರಯ್ಯ ತಂತ್ರಜ್ಞಾನ ವಿಶ್ವವಿದ್ಯಾನಿಲಯ ಬೆಳಗಾವಿ ಇವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್
ಸಹಯೋಗದೊಂದಿಗೆ ಬೆಂಗಳೂರಿನ ಬಿ ಎಮ್ ಎಸ್ ತಾಂತ್ರಿಕ ಕಾಲೇಜಿನಲ್ಲಿ ಜುಲೈ ೨೫ ರಿಂದ ೨೭ರವರೆಗೆ ಆಯೋಜಿಸಲಾದ ರಾಜ್ಯಮಟ್ಟದ ಇಂಜಿನಿಯರಿ0ಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನ “ಸೃಷ್ಟಿ”ಯಲ್ಲಿ ಅತ್ಯುತ್ತಮ ಪ್ರಾಜೆಕ್ಟ್ ಸಾಂತ್ವನ ಪ್ರಶಸ್ತಿ ದೊರೆತಿದೆ. ಈ ಪ್ರಾಜೆಕ್ಟ್
ಪ್ರದರ್ಶನದಲ್ಲಿ ಕರ್ನಾಟಕದಾದ್ಯಂತ ೧೦೪ ಕಾಲೇಜಿನ ೧೭೫೦ ವಿದ್ಯಾರ್ಥಿಗಳು ಭಾಗವಹಿಸಿವು. ಈ ಸ್ಪರ್ಧೆಯು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿತ್ತು.

ವಿದ್ಯಾರ್ಥಿಗಳ ಈ ಯಂತ್ರವು ಉದ್ಯಮ ಮತ್ತು ಕೃಷಿ ವಲಯದಲ್ಲಿನ ಸಮಸ್ಯೆಗಳಿಗೆ ಪರಿಹರಿಸಲು ಸಹಕಾರಿಯಾಗಿದೆ. ಈ ಸ್ಪರ್ಧೆಯ ಬಹುಮಾನ
ವಿತರಣೆಯು ಬೆಂಗಳೂರಿನ ಬಿ ಎಮ್ ಎಸ್ ಕಾಲೇಜಿನಲ್ಲಿ ವಿಟಿಯು ಬೆಳಗಾವಿಯ ಉಪಕುಲಪತಿ ಡಾ. ಕರಿಸಿದ್ದಪ್ಪ ರವರ ನೇತೃತ್ವದಲ್ಲಿ ನಡೆಯಿತು.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ,ಉಪ ಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್
ಮತ್ತು ಕಾಲೇಜಿನ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.

 

Vishwa News 24

Recent Posts

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

1 hour ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

4 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

4 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

5 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

5 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

5 hours ago