ಬಂಟ್ವಾಳ :ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಎಂಬಲ್ಲಿ ನಡೆದಿದೆ.
ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಮತ್ತು ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ (23) ಕಾಣೆಯಾದವರು.
ದೇರಳಕಟ್ಟೆಯ ನಡುಪದವು ಪಿ.ಎ.ಕಾಲೇಜಿನಲ್ಲಿ ಫಾರ್ಮಸಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಒಂದು ವಾರಗಳ ಕಾಲ ರಜೆಯಿದ್ದ ಕಾರಣ ಈಕೆ ಮನೆಯಲ್ಲಿದ್ದಳು.
ನ.23 ರಾತ್ರಿ ಮನೆಯವರ ಜೊತೆ ಮಲಗಿದ್ದ ಈಕೆ ಬೆಳಿಗ್ಗೆ ಎದ್ದು ನೋಡುವಾಗ ಅವಳು ಮಲಗಿದ್ದ ಕೋಣೆಯಲ್ಲಿರದೆ ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಿನಾನ್ ಕೆಲ ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದ ಇತ್ತೀಚೆಗೆ ಮರಳಿ ಊರಿಗೆ ಬಂದಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಈತ ಕೂಡ ನ.22. ರಂದು ಮನೆಯವರ ಜೊತೆಗೆ ಮಲಗಿದ್ದು, ಮರು ದಿನ ಅಂದರೆ ನ.23.ರಂದು ಬೆಳಿಗ್ಗೆ ಎದ್ದು ನೋಡುವಾಗ ಮನೆಯಲ್ಲಿರದೆ ಕಾಣೆಯಾಗಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.
ಪ್ರೇಮ ಪ್ರಕರಣದ ಶಂಕೆ
ಅಕ್ಕಪಕ್ಕದ ಮನೆಯ ಹುಡುಗಿ ಮತ್ತು ಹುಡುಗನ ನಡುವೆ ಪ್ರೀತಿ ಪ್ರೇಮದ ಶಂಕೆಯನ್ನು ವ್ಯಕ್ತಪಡಿಸಲಾಗಿದೆ.ಇವರಿಬ್ಬರು ಸಲುಗೆಯಿಂದ ಇದ್ದುದಲ್ಲದೆ, ಪರಿಚಯಸ್ಥರಾಗಿದ್ದಾರೆ. ಹಾಗಾಗಿ ಇವರಿಬ್ಬರು ಒಂದೇ ದಿನ ಕಾಣೆಯಾಗಿರುವುದರ ಹಿಂದೆ ಸಂದೇಹ ವ್ಯಕ್ತವಾಗಿದೆ.ಎರಡು ಮನೆಯವರ ಪೋಷಕರು ಕಾಣೆಯಾದ ಇಬ್ಬರನ್ನು ಹುಡುಕಿಕೊಡುವಂತೆ ಠಾಣೆಗೆ ದೂರು ನೀಡಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…