ಬಂಟ್ವಾಳ :ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಎಂಬಲ್ಲಿ ನಡೆದಿದೆ.
ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಮತ್ತು ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ (23) ಕಾಣೆಯಾದವರು.
ದೇರಳಕಟ್ಟೆಯ ನಡುಪದವು ಪಿ.ಎ.ಕಾಲೇಜಿನಲ್ಲಿ ಫಾರ್ಮಸಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಒಂದು ವಾರಗಳ ಕಾಲ ರಜೆಯಿದ್ದ ಕಾರಣ ಈಕೆ ಮನೆಯಲ್ಲಿದ್ದಳು.
ನ.23 ರಾತ್ರಿ ಮನೆಯವರ ಜೊತೆ ಮಲಗಿದ್ದ ಈಕೆ ಬೆಳಿಗ್ಗೆ ಎದ್ದು ನೋಡುವಾಗ ಅವಳು ಮಲಗಿದ್ದ ಕೋಣೆಯಲ್ಲಿರದೆ ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಿನಾನ್ ಕೆಲ ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದ ಇತ್ತೀಚೆಗೆ ಮರಳಿ ಊರಿಗೆ ಬಂದಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಈತ ಕೂಡ ನ.22. ರಂದು ಮನೆಯವರ ಜೊತೆಗೆ ಮಲಗಿದ್ದು, ಮರು ದಿನ ಅಂದರೆ ನ.23.ರಂದು ಬೆಳಿಗ್ಗೆ ಎದ್ದು ನೋಡುವಾಗ ಮನೆಯಲ್ಲಿರದೆ ಕಾಣೆಯಾಗಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.
ಪ್ರೇಮ ಪ್ರಕರಣದ ಶಂಕೆ
ಅಕ್ಕಪಕ್ಕದ ಮನೆಯ ಹುಡುಗಿ ಮತ್ತು ಹುಡುಗನ ನಡುವೆ ಪ್ರೀತಿ ಪ್ರೇಮದ ಶಂಕೆಯನ್ನು ವ್ಯಕ್ತಪಡಿಸಲಾಗಿದೆ.ಇವರಿಬ್ಬರು ಸಲುಗೆಯಿಂದ ಇದ್ದುದಲ್ಲದೆ, ಪರಿಚಯಸ್ಥರಾಗಿದ್ದಾರೆ. ಹಾಗಾಗಿ ಇವರಿಬ್ಬರು ಒಂದೇ ದಿನ ಕಾಣೆಯಾಗಿರುವುದರ ಹಿಂದೆ ಸಂದೇಹ ವ್ಯಕ್ತವಾಗಿದೆ.ಎರಡು ಮನೆಯವರ ಪೋಷಕರು ಕಾಣೆಯಾದ ಇಬ್ಬರನ್ನು ಹುಡುಕಿಕೊಡುವಂತೆ ಠಾಣೆಗೆ ದೂರು ನೀಡಿದ್ದಾರೆ.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…