ಬಂಟ್ವಾಳ :ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಎಂಬಲ್ಲಿ ನಡೆದಿದೆ.
ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಮತ್ತು ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ (23) ಕಾಣೆಯಾದವರು.
ದೇರಳಕಟ್ಟೆಯ ನಡುಪದವು ಪಿ.ಎ.ಕಾಲೇಜಿನಲ್ಲಿ ಫಾರ್ಮಸಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಒಂದು ವಾರಗಳ ಕಾಲ ರಜೆಯಿದ್ದ ಕಾರಣ ಈಕೆ ಮನೆಯಲ್ಲಿದ್ದಳು.
ನ.23 ರಾತ್ರಿ ಮನೆಯವರ ಜೊತೆ ಮಲಗಿದ್ದ ಈಕೆ ಬೆಳಿಗ್ಗೆ ಎದ್ದು ನೋಡುವಾಗ ಅವಳು ಮಲಗಿದ್ದ ಕೋಣೆಯಲ್ಲಿರದೆ ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಿನಾನ್ ಕೆಲ ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದ ಇತ್ತೀಚೆಗೆ ಮರಳಿ ಊರಿಗೆ ಬಂದಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಈತ ಕೂಡ ನ.22. ರಂದು ಮನೆಯವರ ಜೊತೆಗೆ ಮಲಗಿದ್ದು, ಮರು ದಿನ ಅಂದರೆ ನ.23.ರಂದು ಬೆಳಿಗ್ಗೆ ಎದ್ದು ನೋಡುವಾಗ ಮನೆಯಲ್ಲಿರದೆ ಕಾಣೆಯಾಗಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.
ಪ್ರೇಮ ಪ್ರಕರಣದ ಶಂಕೆ
ಅಕ್ಕಪಕ್ಕದ ಮನೆಯ ಹುಡುಗಿ ಮತ್ತು ಹುಡುಗನ ನಡುವೆ ಪ್ರೀತಿ ಪ್ರೇಮದ ಶಂಕೆಯನ್ನು ವ್ಯಕ್ತಪಡಿಸಲಾಗಿದೆ.ಇವರಿಬ್ಬರು ಸಲುಗೆಯಿಂದ ಇದ್ದುದಲ್ಲದೆ, ಪರಿಚಯಸ್ಥರಾಗಿದ್ದಾರೆ. ಹಾಗಾಗಿ ಇವರಿಬ್ಬರು ಒಂದೇ ದಿನ ಕಾಣೆಯಾಗಿರುವುದರ ಹಿಂದೆ ಸಂದೇಹ ವ್ಯಕ್ತವಾಗಿದೆ.ಎರಡು ಮನೆಯವರ ಪೋಷಕರು ಕಾಣೆಯಾದ ಇಬ್ಬರನ್ನು ಹುಡುಕಿಕೊಡುವಂತೆ ಠಾಣೆಗೆ ದೂರು ನೀಡಿದ್ದಾರೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…