ಬಂಟ್ವಾಳ: ಬಂಟ್ವಾಳದ ತುಂಬೆಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತುಂಬೆ ರಾಮ ನಿವಾಸ ನಿವಾಸಿಯಾಗಿರುವ ವೆಂಕಟೇಶ ಕಾರಂತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿಯಾಗಿದ್ದಾನೆ. ಈತ ತುಂಬೆಯಲ್ಲಿ ಪುರೋಹಿತನಾಗಿ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇನ್ನು ಬಾಲಕಿಗೆ ವೆಂಕಟೇಶ ಕಾರಂತ ಅವರು ಮಲತಂದೆ ಸಂಬಂಧ ಎಂಬ ಮಾಹಿತಿ ಲಭ್ಯವಾಗಿದೆ. ಬಾಲಕಿಯ ತಂದೆ ಅಪಘಾತದಲ್ಲಿ ಮರಣಹೊಂದಿದ ನಂತರ ಆಕೆಯ ತಾಯಿ ಎರಡನೇ ಮದುವೆಯಾಗಿದ್ದು, ಬಾಲಕಿಯೂ ಕೂಡ ಇವರ ಜೊತೆಯಲ್ಲಿ ವಾಸವಾಗಿದ್ದಳು ಎಂದು ತಿಳಿದು ಬಂದಿದೆ.
ಬಾಲಕಿಯ ಮಲತಂದೆಯನ್ನು ಪೋಲಿಸರು ವಶಕ್ಕೆ ಪಡೆದುಕೊಂಡು ಜೈಲಿಗೆ ಕಳುಹಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…