ಬಂಟ್ವಾಳ: ಬಂಟ್ವಾಳದ ತುಂಬೆಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತುಂಬೆ ರಾಮ ನಿವಾಸ ನಿವಾಸಿಯಾಗಿರುವ ವೆಂಕಟೇಶ ಕಾರಂತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿಯಾಗಿದ್ದಾನೆ. ಈತ ತುಂಬೆಯಲ್ಲಿ ಪುರೋಹಿತನಾಗಿ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇನ್ನು ಬಾಲಕಿಗೆ ವೆಂಕಟೇಶ ಕಾರಂತ ಅವರು ಮಲತಂದೆ ಸಂಬಂಧ ಎಂಬ ಮಾಹಿತಿ ಲಭ್ಯವಾಗಿದೆ. ಬಾಲಕಿಯ ತಂದೆ ಅಪಘಾತದಲ್ಲಿ ಮರಣಹೊಂದಿದ ನಂತರ ಆಕೆಯ ತಾಯಿ ಎರಡನೇ ಮದುವೆಯಾಗಿದ್ದು, ಬಾಲಕಿಯೂ ಕೂಡ ಇವರ ಜೊತೆಯಲ್ಲಿ ವಾಸವಾಗಿದ್ದಳು ಎಂದು ತಿಳಿದು ಬಂದಿದೆ.
ಬಾಲಕಿಯ ಮಲತಂದೆಯನ್ನು ಪೋಲಿಸರು ವಶಕ್ಕೆ ಪಡೆದುಕೊಂಡು ಜೈಲಿಗೆ ಕಳುಹಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…