ಬಂಟ್ವಾಳ: ಬಂಟ್ವಾಳದ ತುಂಬೆಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತುಂಬೆ ರಾಮ ನಿವಾಸ ನಿವಾಸಿಯಾಗಿರುವ ವೆಂಕಟೇಶ ಕಾರಂತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿಯಾಗಿದ್ದಾನೆ. ಈತ ತುಂಬೆಯಲ್ಲಿ ಪುರೋಹಿತನಾಗಿ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇನ್ನು ಬಾಲಕಿಗೆ ವೆಂಕಟೇಶ ಕಾರಂತ ಅವರು ಮಲತಂದೆ ಸಂಬಂಧ ಎಂಬ ಮಾಹಿತಿ ಲಭ್ಯವಾಗಿದೆ. ಬಾಲಕಿಯ ತಂದೆ ಅಪಘಾತದಲ್ಲಿ ಮರಣಹೊಂದಿದ ನಂತರ ಆಕೆಯ ತಾಯಿ ಎರಡನೇ ಮದುವೆಯಾಗಿದ್ದು, ಬಾಲಕಿಯೂ ಕೂಡ ಇವರ ಜೊತೆಯಲ್ಲಿ ವಾಸವಾಗಿದ್ದಳು ಎಂದು ತಿಳಿದು ಬಂದಿದೆ.
ಬಾಲಕಿಯ ಮಲತಂದೆಯನ್ನು ಪೋಲಿಸರು ವಶಕ್ಕೆ ಪಡೆದುಕೊಂಡು ಜೈಲಿಗೆ ಕಳುಹಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…