ಬಂಟ್ವಾಳ : ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ.
ಸೋಮವಾರ ಮುಂಜಾನೆ 5 ರ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆ ಗೈದಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಅಲ್ಲಿ ಸೇರಿದವರು ಮೃತನನ್ನು ಗುರುತಿಸಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…