ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ನಿನ್ನೆ (ಮಾ.14) ರಾತ್ರಿ ವಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ರಕ್ಷಿತ್ ಅವರನ್ನ ಮಂಗಳೂರು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅದರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಬಗ್ಗೆ ಪೋಲೀಸ್ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:
ಛಾಯಾಗ್ರಾಹಕ ಸಂಘದ ಬಂಟ್ವಾಳ ವಲಯದ ನಕ್ರೀಯ ಸದಸ್ಯರಾಗಿದ್ದ ರಕ್ಷಿತ್ ಅವರು ಅತ್ಯುತ್ತಮ ವಿಡಿಯೋಗ್ರಾಫರ್ ರಾಗಿದ್ದರು. ರಕ್ಷಿತ್ ಅವರ ಮಗಳ 10 ನೇ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮವನ್ನು ನಾಳೆ (ಮಾ.15) ಮನೆಯಲ್ಲಿ ನಡೆಸಲು ತಯಾರಿಗಳು ಮಾಡಲಾಗಿತ್ತು. ಮಗಳ ಹುಟ್ಟು ಹಬ್ಬದ ಸಂಭ್ರಮದ ಮನೆಯೀಗ ತಂದೆಯ ಸಾವಿನಿಂದ ಮೌನವಾಗಿ ರೋಧಿಸುತ್ತಿದೆ.
ರಕ್ಷಿತ್ ಸಹೋದರ ರಂಜಿತ್ ಅವರು ಕೂಡ ಸುಮಾರು ವರ್ಷಗಳ ಹಿಂದೆ ಅವಘಾತದಲ್ಲಿ ಗಾಯಗೊಂಡು ಮಲಗಿದ ಸ್ಥಿತಿಯಲ್ಲಿ ಮನೆಯಲ್ಲಿದ್ದಾರೆ. ಅತ್ಯಂತ ಬಡ ಕುಟುಂಬ ಇದೀಗ ಮನೆಯ ಆಧಾರಸ್ತಂಭವಿಲ್ಲದೆ ಕಂಗಲಾಗಿದೆ.
ಇದನ್ನೂ ಓದಿ:
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…