ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ನಿನ್ನೆ (ಮಾ.14) ರಾತ್ರಿ ವಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ರಕ್ಷಿತ್ ಅವರನ್ನ ಮಂಗಳೂರು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅದರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಬಗ್ಗೆ ಪೋಲೀಸ್ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:
ಛಾಯಾಗ್ರಾಹಕ ಸಂಘದ ಬಂಟ್ವಾಳ ವಲಯದ ನಕ್ರೀಯ ಸದಸ್ಯರಾಗಿದ್ದ ರಕ್ಷಿತ್ ಅವರು ಅತ್ಯುತ್ತಮ ವಿಡಿಯೋಗ್ರಾಫರ್ ರಾಗಿದ್ದರು. ರಕ್ಷಿತ್ ಅವರ ಮಗಳ 10 ನೇ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮವನ್ನು ನಾಳೆ (ಮಾ.15) ಮನೆಯಲ್ಲಿ ನಡೆಸಲು ತಯಾರಿಗಳು ಮಾಡಲಾಗಿತ್ತು. ಮಗಳ ಹುಟ್ಟು ಹಬ್ಬದ ಸಂಭ್ರಮದ ಮನೆಯೀಗ ತಂದೆಯ ಸಾವಿನಿಂದ ಮೌನವಾಗಿ ರೋಧಿಸುತ್ತಿದೆ.
ರಕ್ಷಿತ್ ಸಹೋದರ ರಂಜಿತ್ ಅವರು ಕೂಡ ಸುಮಾರು ವರ್ಷಗಳ ಹಿಂದೆ ಅವಘಾತದಲ್ಲಿ ಗಾಯಗೊಂಡು ಮಲಗಿದ ಸ್ಥಿತಿಯಲ್ಲಿ ಮನೆಯಲ್ಲಿದ್ದಾರೆ. ಅತ್ಯಂತ ಬಡ ಕುಟುಂಬ ಇದೀಗ ಮನೆಯ ಆಧಾರಸ್ತಂಭವಿಲ್ಲದೆ ಕಂಗಲಾಗಿದೆ.
ಇದನ್ನೂ ಓದಿ:
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…