ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಸೋಮವಾರ ಬೆಳಗ್ಗೆ(ಏ.8 ರಂದು) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.
ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದಿದ್ದು, ಯಾರಿಗೂ ಗಾಯಗಳಾಗಿಲ್ಲ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಘಟನೆ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಬ್ಲಾಕ್ ಆಗಿತ್ತು ಎನ್ನಲಾಗಿದೆ.
ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಅದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ವೇಳೆ ಕಾರು ಬ್ರೇಕ್ ಹಾಕಿದರೂ ನಿಲ್ಲದೇ ಇದ್ದು, ಬಳಿಕ ಚಾಲಕನ ಸಮಯ ಪ್ರಜ್ಞೆಯಿಂದ ಕಾರು ನಿಂತಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದು, ಯಾರಿಗೂ ಯಾವುದೇ ಹಾನಿಯಾಗಿಲ್ಲ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…