Featured

ಬಂಟ್ವಾಳ ಕಾಂಗ್ರೆಸ್‌  ಅಭ್ಯರ್ಥಿ ರಮಾನಾಥ್ ರೈ ಆಸ್ತಿ‌ ವಿವರ – Vishwanews24

ಬಂಟ್ವಾಳ ಕಾಂಗ್ರೆಸ್‌  ಅಭ್ಯರ್ಥಿ ರಮಾನಾಥ್ ರೈ ಆಸ್ತಿ‌ ವಿವರ

ಬಂಟ್ವಾಳ: ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ 9ನೇ ಬಾರಿ ಸ್ಪರ್ಧೆಗೆ ಇಳಿದಿರುವ ಮಾಜಿ ಸಚಿವ ಬಿ. ರಮಾನಾಥ ರೈ 5.15 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.

ನಾಮಪತ್ರದ ಜೊತೆ ಸಲ್ಲಿಸಿರುವ ಅಫಿಡಾವಿಟ್‌ನಲ್ಲಿ 36.25 ಲಕ್ಷ ರೂ. ಮೌಲ್ಯದ ಚರಾಸ್ತಿ ಮತ್ತು 4.79 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿರುವುದಾಗಿ ಮಾಹಿತಿ ನೀಡಿದ್ದಾರೆ.

ಪತ್ನಿ ಧನಭಾಗ್ಯ ಯಾನೆ ಶೈಲಾ ಆರ್ ರೈ ಅವರು 1 ಕೋಟಿ ರೂ. ಮೌಲ್ಯದ ಚರಾಸ್ತಿಯನ್ನು ಹೊಂದಿದ್ದರೆ, ಪುತ್ರಿ ಚರಿಷ್ಮಾ ರೈ ಹೆಸರಲ್ಲಿ 99.04 ಲಕ್ಷ ರೂ. ಮತ್ತು ಪುತ್ರ ಚೈತ್ರದೀಪ್ ರೈ ಹೆಸರಲ್ಲಿ 25.85 ಲಕ್ಷ ರೂ. ಮೌಲ್ಯದ ಚರಾಸ್ತಿಗಳಿವೆ.

ರೈ ಕುಟಂಬದಲ್ಲಿ 9 ವಾಹನ: ರಮಾನಾಥ ರೈ ಕುಟುಂಬದಲ್ಲಿ 9 ವಾಹನಗಳು ಇವೆ. ರೈ ಹೆಸರಿನಲ್ಲಿ ಇನೋವಾ, ಟೊಯೇಟೊ ಮತ್ತು ಟಾಟಾ ಟಿಯಾಗೋ ಎಕ್ಸ್ ಝಡ್ ವಾಹನ ಇದೆ. ಪತ್ನಿ ಮತ್ತು ಪುತ್ರನ ಬಳಿ ವಾಹನ ಇಲ್ಲ. ಆದರೆ ಪುತ್ರಿ ಚರಿಷ್ಮಾ ಬಳಿ 7 ವಾಹನಗಳಿವೆ.

ರೈ ಅವರಲ್ಲಿ 6.15 ಲಕ್ಷ ರೂ. ಮೌಲ್ಯದ 110 ಗ್ರಾಂ ಚಿನ್ನ ಮತ್ತು 77 ಸಾವಿರ ರೂ. ಮೌಲ್ಯದ 1,000 ಗ್ರಾಂ ಬೆಳ್ಳಿ, ಪತ್ನಿ 72.73 ಲಕ್ಷ ರೂ. ಮೌಲ್ಯದ 1,300 ಗ್ರಾಂ ಚಿನ್ನ ಮತ್ತು 38,500 ಮೌಲ್ಯದ 500 ಗ್ರಾಂ ಬೆಳ್ಳಿ, ಪುತ್ರಿ ಬಳಿ 22.38 ಲಕ್ಷ ರೂ. ಮೌಲ್ಯದ 400 ಗ್ರಾಂ ಚಿನ್ನ, 19,250 ರೂ. ಮೌಲ್ಯದ 250 ಗ್ರಾಂ ಬೆಳ್ಳಿ, ಪುತ್ರ ಬಳಿ 5.59 ಲಕ್ಷ ರೂ.ಮೌಲ್ಯದ 100 ಗ್ರಾಂ ಚಿನ್ನ ಮತ್ತು 7,700ರೂ.ಮೌಲ್ಯದ ಬೆಳ್ಳಿ ಇವೆ.

ಕುಟುಂಬದ ಸಾಲ 7.63 ಕೋಟಿ ರೂ. ರೈ 2.03 ಕೋಟಿ ರೂ, ಪತ್ನಿ 5.10 ಕೋಟಿ ರೂ ಮತ್ತು ಪುತ್ರಿ 50.50 ಲಕ್ಷ ರೂ. ಸಾಲದಲ್ಲಿದ್ದಾರೆ. ವಾರ್ಷಿಕ ಆದಾಯ 2021-22ರಲ್ಲಿ ರೈ ಅವರದ್ದು 22.15 ಲಕ್ಷ ರೂ, ಧನಭಾಗ್ಯ ರೈ 4.88 ಲಕ್ಷ ರೂ. ಮತ್ತು ಚರಿಷ್ಮಾ ರೈ 9.29 ಲಕ್ಷ ರೂ.

ಒಂದು ಪ್ರಕರಣ : 2018ರ ಚುನಾವಣೆ ವೇಳೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಸಾರ್ವಜನಿಕರಿಗೆ ಹಣ ಹಂಚಲು ಹಣ ಸಂಗ್ರಹಿಸಿಟ್ಟ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago