ಮಂಗಳೂರು: ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿಬೈಲು ಹೆಸರನ್ನು ಕೇಳದೆ ಇರುವವರು ಕರಾವಳಿಯಲ್ಲಿ ಬಹು ವಿರಳ. ಈ ಕ್ಷೇತ್ರದ ಹೆಸರಲ್ಲೇ ಒಂದು ರೀತಿಯ ಭಯ ಭಕ್ತಿ ಶ್ರದ್ಧೆ ಇದೆ.
ಈ ಕ್ಷೇತ್ರ ಅತಿ ಕಾರಣಿಕದ ದೈವಸ್ಥಾನವಾಗಿದೆ. ಪನೋಲಿಬೈಲು ಸುಮಾರು 400 ಕ್ಕೂ ಹೆಚ್ಚು ಇತಿಹಾಸವಿರುವ ದೈವಸ್ಥಾನಗಳಲ್ಲಿ ಒಂದಾಗಿದೆ. ಉಪ್ಪಿನಂಗಡಿಯ ವೈಲಾಯ ಎಂಬವರ ಕುಲದೇವರಾಗಿ ಬೆಳಗಿದ ಕಲ್ಲುರ್ಟಿ ಕಲ್ಕುಡರೆಂಬ ಎರಡು ದೈವ ಶಕ್ತಿಗಳು ಶ್ರೀ ಕ್ಷೇತ್ರ ಪನೋಲಿಬೈಲಿನಲ್ಲಿ ನೆಲೆಯಾದರು ಎಂಬುದು ಇಲ್ಲಿನ ಚಾರಿತ್ರ್ಯ. ಪನೋಲಿಬೈಲ್ ಕ್ಷೇತ್ರದಲ್ಲಿ ಅನೇಕ ಕಾರಣಿಕಗಳು ನಡೆದಿದೆ, ಇಂದಿಗೂ ನಡೆಯುತ್ತಲೇ ಇದೆ. ಭಕ್ತರು ನೀಡುವ ಅಗೇಲು ಸೇವೆ ದಾಖಲೆಯ ಪುಟ ಸೇರಿದೆ.
ಈ ದೈವೀ ಕ್ಷೇತ್ರವನ್ನು ನಂಬಿ ಅದೆಷ್ಟೋ ನೊಂದ ಜೀವಗಳು ಈ ತಾಯಿಯ ಹೆಸರನ್ನು ಹೇಳಿ ಜೀವನ ನಡೆಸುತ್ತಿದ್ದಾರೆ. ಮನೆಯಲ್ಲಿ ಕಷ್ಟ, ಅನಾರೋಗ್ಯ, ಕಂಕಣಭಾಗ್ಯ, ಆಸ್ತಿ ವಿಚಾರದಲ್ಲಿ ತಕರಾರು ಇದ್ದವರು ಇಲ್ಲಿಗೆ ಹರಕೆ ಹೇಳಿದರೆ ಸಾಕು, ಕ್ಷಣ ಮಾತ್ರದಲ್ಲಿ ನೆನೆದ ಕೆಲಸ ಕೈಗೂಡಿದ ನಿದರ್ಶನಗಳಿವೆ. ಇಂದಿಗೂ ಕೂಡ ಅದು ನಡೆಯುತ್ತಿದೆ ಎಂಬುದೇ ಪವಾಡ. ಆದ್ದರಿಂದಲೇ ಪನೋಲಿಬೈಲ್ ಕ್ಷೇತ್ರಕ್ಕೆ ಭಕ್ತರ ದಂಡೇ ಅಗಮಿಸುತ್ತದೆ.
ನಿನ್ನೆ ರಾತ್ರಿ ನಡೆದ ವರ್ಷಾವಧಿ ಕೋಲೋತ್ಸವ ಕಣ್ತುಂಬಿಕೊಳ್ಳಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪುನೀತರಾದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…