ಬಂಟ್ವಾಳ : ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನರಿಕೊಂಬು ಎಂಬಲ್ಲಿ ನಡೆದಿದೆ.
ಬಂಟ್ವಾಳ ನಿವಾಸಿ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್ (22) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕ.
ರಮೇಶ್ ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಆದರೆ ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ಈವರೆಗೆ ತಿಳಿದುಬಂದಿಲ್ಲ.
ಅತ್ಯಂತ ಸೌಮ್ಯ ಸ್ವಭಾವದ ಶ್ರಮ ಜೀವಿಯಾಗಿದ್ದ ರಮೇಶ್ ಇಲ್ಲಿನ ಸ್ಥಳೀಯ ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತನ ಅಣ್ಣ ಕೂಡ ಕಳೆದ ವರ್ಷ ಇವರ ಹಳೆಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಶೇಖರ ಪೂಜಾರಿ ಅವರಿಗೆ ಇಬ್ಬರು ಗಂಡು ಮಕ್ಕಳು, ಇದೀಗ ಇಬ್ಬರು ಕೂಡ ಆತ್ಮಹತ್ಯೆ ಮಾಡಿಕೊಂಡಂತಾಗಿದೆ. ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್ ಹಾಗೂ ಊರಿನ ಅನೇಕರು ಬೇಟಿ ನೀಡಿದ್ದಾರೆ. ಬಂಟ್ವಾಳ ನಗರ ಠಾಣಾ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…