ಬಂಟ್ವಾಳ: ಖಾಸಗಿ ಬಸ್ಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕರ ಸಹಿತ ಪ್ರಯಾಣಿಕರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿಸಿರೋಡಿನ ನೇತ್ರಾವತಿ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ.
ಇಲ್ಲಿನ ಬಿಸಿರೋಡಿನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜೀಪ ರೂಟ್ ನ ಶಾರದ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಘಟನೆಯಿಂದ ಬಸ್ ಚಾಲಕರು ಹಾಗೂ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 8 ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ. ಇದೇ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಬಸ್ ಗೆ ಡಿಕ್ಕಿಯಾಗಿದ್ದು ಯಾವುದೇ ಅಪಾಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಲಭ್ಯವಾಗಿಲ್ಲ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾಗಿತ್ತು.
ಗಜಲಕ್ಷಿ ಕ್ರೇನ್ ಮೂಲಕ ಬಸ್ ಗಳನ್ನು ಸ್ಥಳದಿಂದ ಬದಿಗೆ ಸರಿಸಿದ ಬಳಿಕ ಸಂಚಾರಕ್ಕೆ ಅನುಕೂಲ ಮಾಡಿ ಕೊಡಲಾಯಿತು. ಮೆಲ್ಕಾರ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…