ಬಂಟ್ವಾಳ : ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
2024 ರಲ್ಲಿ ಬಿ.ಸಿ.ರೋಡಿನ ಪೇಟೆಯ ಅಂಗಡಿಗಳಲ್ಲಿ ಖೋಟಾ ನೋಟನ್ನು ಚಲಾವಣೆಗೆ ತಂದು ಪೊಲೀಸರ ಕೈಗೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದರೆ ಓರ್ವ ಆರೋಪಿ ಪರಾರಿಯಾಗಿದ್ದ. ಕೇರಳ ನಿವಾಸಿಗಳಾದ ಮಹಮ್ಮದ್ ಸಿ.ಎ. ಮತ್ತು ಖಮರುನ್ನೀಶ ಪೊಲೀಸರ ಕೈಗೆ ಸಿಕ್ಕಿಕೊಂಡಿದ್ದರು. ಆದರೆ ತಲೆಮರೆಸಿಕೊಂಡಿದ್ದ ಇನ್ನೋರ್ವ ಪ್ರಮುಖ ಆರೋಪಿಯಾಗಿದ್ದ ಕೇರಳ ಚೆಂಗಳ ನಿವಾಸಿ ಶರೀಫ್ ಪಿ.ಎ. ಎಂಬಾತನನ್ನು ಇದೀಗ ಬಂಟ್ವಾಳ ಪೊಲೀಸರ ತಂಡ ಕಾಸರಗೋಡಿನ ವಿದ್ಯಾನಗರದಲ್ಲಿ ಬಂಧಿಸಿದೆ.
ಇವರ ತಂಡ ಕಾರಿನಲ್ಲಿ ಬಂದು ಅಂಗಡಿಗಳಲ್ಲಿ 500 ಮುಖ ಬೆಲೆಯ ಖೋಟಾ ನೋಟುಗಳನ್ನು ಬಹಳ ನಾಜೂಕಾಗಿ ಚಲಾವಣೆ ಮಾಡುತ್ತಿದ್ದರು. 10 ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು ಅಂದರೆ 100 ರೂಪಾಯಿಗಿಂತ ಕಡಿಮೆ ಬೆಲೆಯ ಸಾಮಾಗ್ರಿಗಳನ್ನು ಪಡೆದು ಚಿಲ್ಲರೆ ಹಣವನ್ನು ಪಡೆದು ನಕಲಿ ಹಣವನ್ನು ಅಸಲಿಯಾಗಿ ಪರಿವರ್ತನೆ ಮಾಡಿ ಹೊರಟು ಹೋಗುತ್ತಿದ್ದರು. ಆದರೆ ಇವರ ಅಸಲಿ ಕಥೆಯ ಬಗ್ಗೆ ಅಂಗಡಿಯ ಮಾಲಕರುಗಳಿಗೆ ಸಂಶಯ ಬಂದು ಪೋಲೀಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಮತ್ತು ಎಸ್.ಐ.ರಾಮಕೃಷ್ಣ ಅವರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…
ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…
ಮೂಡುಬಿದಿರೆ: ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…
ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…
ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…
ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…