Featured

ಬಂಟ್ವಾಳ : ಖೋಟಾ ನೋಟು ಚಲಾವಣೆ ;  ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ – vishwanews24

ಬಂಟ್ವಾಳ : ಖೋಟಾ ನೋಟು ಚಲಾವಣೆ :  ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ

ಬಂಟ್ವಾಳ : ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

2024 ರಲ್ಲಿ ಬಿ.ಸಿ.ರೋಡಿನ ಪೇಟೆಯ ಅಂಗಡಿಗಳಲ್ಲಿ ಖೋಟಾ ನೋಟನ್ನು ಚಲಾವಣೆಗೆ ತಂದು ಪೊಲೀಸರ ಕೈಗೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದರೆ ಓರ್ವ ಆರೋಪಿ ಪರಾರಿಯಾಗಿದ್ದ. ಕೇರಳ ನಿವಾಸಿಗಳಾದ ಮಹಮ್ಮದ್ ಸಿ.ಎ. ಮತ್ತು ಖಮರುನ್ನೀಶ ಪೊಲೀಸರ ಕೈಗೆ ಸಿಕ್ಕಿಕೊಂಡಿದ್ದರು. ಆದರೆ ತಲೆಮರೆಸಿಕೊಂಡಿದ್ದ ಇನ್ನೋರ್ವ ಪ್ರಮುಖ ಆರೋಪಿಯಾಗಿದ್ದ ಕೇರಳ ಚೆಂಗಳ ನಿವಾಸಿ ಶರೀಫ್ ಪಿ.ಎ. ಎಂಬಾತನನ್ನು ಇದೀಗ ಬಂಟ್ವಾಳ ಪೊಲೀಸರ ತಂಡ ಕಾಸರಗೋಡಿನ ವಿದ್ಯಾನಗರದಲ್ಲಿ ಬಂಧಿಸಿದೆ.

ಇವರ ತಂಡ ಕಾರಿನಲ್ಲಿ ಬಂದು ಅಂಗಡಿಗಳಲ್ಲಿ 500 ಮುಖ ಬೆಲೆಯ ಖೋಟಾ ನೋಟುಗಳನ್ನು ಬಹಳ ನಾಜೂಕಾಗಿ ಚಲಾವಣೆ ಮಾಡುತ್ತಿದ್ದರು. 10 ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು ಅಂದರೆ 100 ರೂಪಾಯಿಗಿಂತ ಕಡಿಮೆ ಬೆಲೆಯ ಸಾಮಾಗ್ರಿಗಳನ್ನು ಪಡೆದು ಚಿಲ್ಲರೆ ಹಣವನ್ನು ಪಡೆದು ನಕಲಿ ಹಣವನ್ನು ಅಸಲಿಯಾಗಿ ಪರಿವರ್ತನೆ ಮಾಡಿ ಹೊರಟು ಹೋಗುತ್ತಿದ್ದರು. ಆದರೆ ಇವರ ಅಸಲಿ ಕಥೆಯ ಬಗ್ಗೆ ಅಂಗಡಿಯ ಮಾಲಕರುಗಳಿಗೆ ಸಂಶಯ ಬಂದು ಪೋಲೀಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಮತ್ತು ಎಸ್.ಐ.ರಾಮಕೃಷ್ಣ ಅವರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

8 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

8 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

8 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

8 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

8 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

9 hours ago