ಬಂಟ್ವಾಳ : ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
2024 ರಲ್ಲಿ ಬಿ.ಸಿ.ರೋಡಿನ ಪೇಟೆಯ ಅಂಗಡಿಗಳಲ್ಲಿ ಖೋಟಾ ನೋಟನ್ನು ಚಲಾವಣೆಗೆ ತಂದು ಪೊಲೀಸರ ಕೈಗೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದರೆ ಓರ್ವ ಆರೋಪಿ ಪರಾರಿಯಾಗಿದ್ದ. ಕೇರಳ ನಿವಾಸಿಗಳಾದ ಮಹಮ್ಮದ್ ಸಿ.ಎ. ಮತ್ತು ಖಮರುನ್ನೀಶ ಪೊಲೀಸರ ಕೈಗೆ ಸಿಕ್ಕಿಕೊಂಡಿದ್ದರು. ಆದರೆ ತಲೆಮರೆಸಿಕೊಂಡಿದ್ದ ಇನ್ನೋರ್ವ ಪ್ರಮುಖ ಆರೋಪಿಯಾಗಿದ್ದ ಕೇರಳ ಚೆಂಗಳ ನಿವಾಸಿ ಶರೀಫ್ ಪಿ.ಎ. ಎಂಬಾತನನ್ನು ಇದೀಗ ಬಂಟ್ವಾಳ ಪೊಲೀಸರ ತಂಡ ಕಾಸರಗೋಡಿನ ವಿದ್ಯಾನಗರದಲ್ಲಿ ಬಂಧಿಸಿದೆ.
ಇವರ ತಂಡ ಕಾರಿನಲ್ಲಿ ಬಂದು ಅಂಗಡಿಗಳಲ್ಲಿ 500 ಮುಖ ಬೆಲೆಯ ಖೋಟಾ ನೋಟುಗಳನ್ನು ಬಹಳ ನಾಜೂಕಾಗಿ ಚಲಾವಣೆ ಮಾಡುತ್ತಿದ್ದರು. 10 ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು ಅಂದರೆ 100 ರೂಪಾಯಿಗಿಂತ ಕಡಿಮೆ ಬೆಲೆಯ ಸಾಮಾಗ್ರಿಗಳನ್ನು ಪಡೆದು ಚಿಲ್ಲರೆ ಹಣವನ್ನು ಪಡೆದು ನಕಲಿ ಹಣವನ್ನು ಅಸಲಿಯಾಗಿ ಪರಿವರ್ತನೆ ಮಾಡಿ ಹೊರಟು ಹೋಗುತ್ತಿದ್ದರು. ಆದರೆ ಇವರ ಅಸಲಿ ಕಥೆಯ ಬಗ್ಗೆ ಅಂಗಡಿಯ ಮಾಲಕರುಗಳಿಗೆ ಸಂಶಯ ಬಂದು ಪೋಲೀಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಮತ್ತು ಎಸ್.ಐ.ರಾಮಕೃಷ್ಣ ಅವರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…
ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ …
ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ ಮಂಗಳೂರು : ರಾತ್ರಿ…