Featured

ಬಂಟ್ವಾಳ : ಗಣೇಶೋತ್ಸವದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗೆ ಧಕ್ಕೆ ; ಆರೋಪಿ ಅರೆಸ್ಟ್ – vishwanews24

ಬಂಟ್ವಾಳ : ಗಣೇಶೋತ್ಸವದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗೆ ಧಕ್ಕೆ ; ಆರೋಪಿ ಅರೆಸ್ಟ್

ಬಂಟ್ವಾಳ : ಗಣೇಶೋತ್ಸವಕ್ಕೆ ಹಾಕಿದ್ದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತನನ್ನು ಫರಂಗಿಪೇಟೆಯ ನಿವಾಸಿಯಾದ ಹೈದರ್ ಎಂದು ಗುರುತಿಸಲಾಗಿದೆ.

ಬಂಟ್ವಾಳ ಫರಂಗಿಪೇಟೆ ನಿವಾಸಿ ಚಂದ್ರಶೇಖರ್ ಆಳ್ವ ಎನ್ನುವವರು ಪರಂಗಿಪೇಟೆ ಸೇವಾಂಜಲಿ ಭವನದಲ್ಲಿ ನಡೆಯುತ್ತಿರುವ ಗಣೇಶೋತ್ಸವ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರನ್ನು, ಅಗತ್ಯ ಇಲಾಖೆಯಿಂದ ಪೂರ್ವಾನುಮತಿ ಪಡೆದು, ದಿನಾಂಕ: 25.08.2025 ರಂದು ರೂ 3,500/- ವೆಚ್ಚದಲ್ಲಿ ಪರಂಗಿಪೇಟೆಯ ಕುಂಪಣ ಮಜಲು ಕ್ರಾಸ್ ಬಳಿ ಬ್ಯಾನರ್ ಅಳವಡಿಸಿರುತ್ತಾರೆ.

ಸದ್ರಿ ಬ್ಯಾನರನ್ನು ದಿನಾಂಕ 27.08.2025 ರಂದು ರಾತ್ರಿ ವೇಳೆ, ಫರಂಗಿಪೇಟೆಯ ನಿವಾಸಿಯಾದ ಹೈದರ್ ಎಂಬಾತನು ಹರಿದು ಹಾಕಿದ್ದಾನೆ. ಈ ಕೃತ್ಯದಿಂದಾಗಿ ಸಾರ್ವಜನಿಕರು ಪ್ರಚೋದನೆಗೊಂಡು ಗಲಭೆ ಏಳಬಹುದೆಂದು ತಿಳಿದಿದ್ದರೂ ಕೂಡಾ, ಉದ್ದೇಶಪೂರ್ವಕವಾಗಿ ಕೃತ್ಯ ನಡೆಸಿ ಸಾರ್ವಜನಿಕ ವಲಯದಲ್ಲಿ ಭೀತಿಯನ್ನುಂಟು ಮಾಡಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ:129/2025, ಕಲಂ: 299,192,353 (1), (b),57,324(4) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಆರೋಪಿ ಹೈದರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

13 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

13 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago