ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯರಾತ್ರಿ ವೇಳೆ ನಡೆದಿದೆ.
ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29 ವ) ಕೊಲೆಯಾದ ಯುವಕ. ಅತನ ಸ್ನೇಹಿತರಾದ ನೌಫಾಲ್ ಮತ್ತು ಇನ್ನೋರ್ವ ಈ ಕೃತ್ಯ ನಡೆಸಿದ್ದಾರೆ.
ಇವರು ಗಾಂಜ ಗಿರಾಕಿಗಳಾಗಿದ್ದು, ತಲಪಾಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಹೊಟೇಲ್ ಒಂದರ ಸಮೀಪದಲ್ಲಿ ರಾತ್ರಿ ಒಂದು ಗಂಟೆಯ ವೇಳೆ ಮಾತಿಗೆ ಮಾತು ಬೆಳೆದು ಗಾಂಜ ವಿಚಾರದಲ್ಲಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಮೂವರು ಗಾಂಜ ಸೇವಕರು ಮತ್ತು ಮಾರಾಟಗಾರರು ಎಂಬ ಮಾತುಗಳು ಸ್ಥಳೀಯರಿಂದ ಹೇಳಲಾಗುತ್ತಿದ್ದು, ಇತ್ತೀಚಿಗೆ ಗಾಂಜಾ ವಿಚಾರದಲ್ಲಿ ಗಲಾಟೆಗಳು ನಡೆಯುವುದು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಪೊಲೀಸರು ಗಾಂಜಾ ವಿಚಾರದಲ್ಲಿ ಹೆಚ್ಚಿನ ಗಮನ ಹರಿಸಿ ಬಂಟ್ವಾಳದಲ್ಲಿ ಶಾಂತಿ ನೆಲೆಸಲು ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ, ಎಸ್.ಐ.ಅವಿನಾಶ್ ಹಾಗೂ ಸಿಬ್ಬಂದಿಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…