ಬಂಟ್ವಾಳ (Vishwanews24) : ರಾತ್ರಿ ಸಂದರ್ಭ ವಾಹನ ತಪಾಸಣೆ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೆಜಿ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಮಂಜೇಶ್ವರ ತಾಲೂಕಿನ್ ಅಪಾತೂರು ಕಜೆ ನಿವಾಸಿ ನಾಸಿರ್ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಪಡೂರು ಗ್ರಮದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುವ ಸಮಯ 2 ಕೆ.ಜಿ ತೂಕದ 20 ಸಾವಿರ ರೂಪಾಯಿ ಬೆಲೆಬಾಳುವ ಗಾಂಜಾವನ್ನು ಕಾರಿನಲ್ಲಿ ಸಾಗಾಟಕ್ಕೆ ಯತ್ನಿಸಿದ್ದು, ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಬಾಕ್ರಬೈಲಿನ ಬಾರಿಕ್ ಹಾಗೂ ಪಾತೂರಿನ ಮುಸ್ತಾಫ ತಲೆ ಮರೆಸಿಕೊಂಡಿದ್ದು, ಬಂಟ್ವಾಳದ ಪೊಲೀಸ್ ಸರ್ಕಲ್ ಇನ್ ಸ್ಪೆಕ್ಟರ್ ಟಿ.ಡಿ ನಾಗರಾಜ್ ತನಿಖೆ ಮುಂದುವರಿಸಿದ್ದಾರೆ. ಆರೋಪಿಯಿಂದ 2ಲಕ್ಷ ರೂ ಮೌಲ್ಯದ ಆಲ್ಟೋ ಕಾರು, 20 ಸಾವಿರ ರೂ. ಮೌಲ್ಯದ 2 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಉಡುಪಿ : ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಏ.11 ರಿಂದ ಆರಂಭ: ಡಿಸಿ ಜಿ.ಜಗದೀಶ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…