ಬಂಟ್ವಾಳ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಸಾವನ್ನಪ್ಪಿದ ಘಟನೆ ಮಾಣಿ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿಯ ನಿನ್ನಿಕಲ್ ನಿವಾಸಿ ರಾಧ(66) ಮೃತ ಮಹಿಳೆ. ಇವರು ಬಸ್ನಿಂದ ಹೊರಗೆಸೆಯಲ್ಪಟ್ಟ ದೃಶ್ಯ ಬಸ್ಸಿನಲ್ಲಿ ಅಳವಡಿಸಿದ್ದ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮಗುವನ್ನು ಹಿಡಿದುಕೊಂಡು ಮಹಿಳೆಯೊಬ್ಬರು ಬಸ್ ಹತ್ತಿದ್ದರು. ಹೀಗಾಗಿ ರಾಧಾ ಅವರು ಮಹಿಳೆಗೆ ಸೀಟು ಬಿಟ್ಟುಕೊಡಲು ಸೀಟಿನಿಂದ ಎದ್ದಿದ್ದಾರೆ. ಬಳಿಕ ಮುಂದಿನ ಬಾಗಿಲ ಬಳಿ ಬಸ್ಸಿನ ಸರಳು ಹಿಡಿದುಕೊಂಡು ನಿಂತಿದ್ದರು. ಈ ವೇಳೆ ಕೈ ಜಾರಿ ರಾಧಾ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ರಾಧಾ ಅವರನ್ನು ಆಸ್ಪತ್ರೆ ಸಾಗಿಸಿದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಬಸ್ ಚಾಲಕ, ನಿರ್ವಾಹಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…