ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.
ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಮೃತಪಟ್ಟ ಮಹಿಳೆಯಾಗಿದ್ದು. ಚಾಲಕ ರೂಪೇಶ್ (40) ಅವರಿಗ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ ಸುಚಿತ್ರ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಇನ್ನು ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲೂಡಿ ಇಂಜಿನಿಯರ್ ಗೋಪಾಲ ಸಹೋದರಿ ಭಾಗೀರಥಿ ಅವರು ಅವರು ಮೃತಪಟ್ಟಿದ್ದಾರೆ. ಭಾಗೀರಥಿ ಅವರ ಮಗಳು ಸುಚಿತ್ರ ಅವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ ವಾಪಾಸ್ಸು ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು, ಜೀವಹಾನಿಗಳು ನಡೆದಿವೆ. ಇತ್ತೀಚೆಗೆ ಇದೊಂದು ಆ್ಯಕ್ಸಿಡೆಂಟ್ ಸ್ಪಾಟ್ ಆಗಿ ಪರಿವರ್ತನೆ ಆಗುತ್ತಿದೆ ಎಂದು ಸಾರ್ವಜನಿಕರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…